ʻಮೇಲ್ಜಾತಿಯವರು ಮೀಸಲಾತಿಗೆ ಅರ್ಹರಲ್ಲʼ

SIDDARAMAYYA
Advertisement

ಮೇಲ್ಜಾತಿಯಲ್ಲಿರುವವರು ಮೀಸಲಾತಿಗೆ ಅರ್ಹರಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರು ಜಿಲ್ಲೆಯ ಹೆಚ್​​.ಡಿ.ಕೋಟೆಯಲ್ಲಿ ಮಾತನಾಡಿದ ಅವರು, ಯಾರು ಹಿಂದುಳಿದಿದ್ದಾರೋ ಅವರಿಗೆ ಮಾತ್ರ ಮೀಸಲಾತಿ ಸಿಗಬೇಕು. ಆದರೆ ಮೇಲ್ಜಾತಿಯವರಿಗೆ 10% ಮೀಸಲಾತಿ ಕೊಟ್ಟಿದ್ದಾರೆ ಅದು ಸರಿನಾ ಎಂದು ಅವರು ಪ್ರಶ್ನಿಸಿದ್ದಾರೆ. ಬಸವಣ್ಣ ಅನುಭವ ಮಂಟಪ ಮಾಡಿ ಸಮಾನ ಅವಕಾಶ ಕೊಟ್ಟಿದ್ದಾರೆ. ಜಾತಿ ವ್ಯವಸ್ಥೆ ಇರಬಾರದು ಎಲ್ಲರೂ ಮನುಷ್ಯರಾಗಿ ಬದುಕಬೇಕು. ಅಧಿಕಾರ ಸಮಾನವಾಗಿ ಹಂಚಿಕೆಯಾದ್ರೆ ಜಾತಿ ವ್ಯವಸ್ಥೆ ಹೋಗುತ್ತದೆ ಎಂದರು.