ಅಂಜಲಿ ನಿವಾಸಕ್ಕೆ ಗೃಹ ಸಚಿವ ಜಿ.ಪರಮೇಶ್ವರ ಭೇಟಿ‌‌‌

Advertisement

ಹುಬ್ಬಳ್ಳಿ: ಪಾಗಲ್ ಪ್ರೇಮಿಯ ಕುಕೃತ್ಯಕ್ಕೆ ಬಲಿಯಾದ ಅಂಜಲಿ ಅಂಬಿಗೇರ ನಿವಾಸಕ್ಕೆ ಗೃಹ ಸಚಿವ ಡಾ. ಜಿ.ಪರಮೇಶ್ವರ ಸೋಮವಾರ ಭೇಟಿ ನೀಡಿದರು.
ವೀರಾಪುರ ಓಣಿಯಲ್ಲಿರುವ ಅಂಜಲಿ ನಿವಾಸಕ್ಕೆ ಭೇಟಿ ನೀಡಿದ ಅವರು, ಮೃತಳ ಅಜ್ಜಿ ಗಂಗಮ್ಮ ಹಾಗೂ ಆಕೆಯ ಸಹೋದರಿಯರಿಗೆ ಸಾಂತ್ವನ ಹೇಳಿದರು. ಶಾಸಕರಾದ ಪ್ರಸಾದ ಅಬ್ಬಯ್ಯ, ಎನ್.ಎಚ್. ಕೋನರಡ್ಡಿ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಗೃಹ ಸಚಿವರಿಗೆ ಸಾಥ್ ನೀಡಿದರು.