ಅನಿಲ ಸೋರಿಕೆ ಶಂಕೆ: ಒಂದೇ ಕುಟುಂಬದ ನಾಲ್ವರು ಸಾವು

Advertisement

ಮೈಸೂರು: ಅಡುಗೆ ಅನಿಲ ಸೋರಿಕೆಯಿಂದ ಉಸಿರುಗಟ್ಟಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಮೈಸೂರಿನ ಯರಗನಹಳ್ಳಿ ಎಂಬಲ್ಲಿ ಸಂಭವಿಸಿದೆ.
ಕುಮಾರಸ್ವಾಮಿ (45), ಪತ್ನಿ ಮಂಜುಳಾ (39) ಹಾಗೂ ಮಕ್ಕಳಾದ ಅರ್ಚನಾ (19), ಸ್ವಾತಿ (17) ಮೃತರು. ಸ್ಥಳಕ್ಕೆ ನಗರ ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.