ಅನ್ಯ ಕೋಮಿನ ಯುವಕನಿಂದ ಶಿಕ್ಷಕಿ ಅಪಹರಣ

Advertisement

ಹುಬ್ಬಳ್ಳಿ: ಕುಂದಗೋಳ ತಾಲೂಕಿನ ಕಳಸ ಗ್ರಾಮದ ಶ್ರೀ ಅಖಂಡೇಶ್ವರ ಜಾತ್ರೆಗೆ ಹೋದವಳನ್ನು ಅನ್ಯ ಕೋಮಿನ ಯುವಕ ಅಪರಿಸಿಕೊಂಡು ಹೋಗಿದ್ದಾರೆ ಎಂದು ಆರೋಪಿಸಿ ಯುವತಿಯ ತಂದೆ ಗುಡಗೇರಿ ಪೊಲೀಸ್ ಠಾಣೆಯಲ್ಲಿ ದೂರ ದಾಖಲಿಸಿದ ಘಟನೆ ನಡೆದಿದೆ.
ಈ ಹಿಂದೆ ಅತಿಥಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ಯುವತಿಯನ್ನು ಜಾತ್ರೆಗೆ ಹೋದ ಸಂದರ್ಭದಲ್ಲಿ ಹಾವೇರಿ ಜಿಲ್ಲೆಯ ಸುಬಾನಿ ಎಂಬ ಯುವಕ ಅಪಹರಿಸಿದ್ದಾನೆ ಎಂದು ಯುವತಿಯ ತಂದೆ ಗುಡಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆದರೆ ಇಬ್ಬರ ಮಧ್ಯೆ ಈ ಮೊದಲಿನಿಂದಲೂ ಸ್ನೇಹವಿತ್ತು ಎಂದು ಹೇಳಲಾಗಿದೆ.