ಡಬಲ್‌ ಅಲ್ಲ ತ್ರಿಬಲ್‌ ಎಂಜಿನ್‌ ಸರ್ಕಾರ

Advertisement

ಮುಂಬೈ: ಮಹಾರಾಷ್ಟ್ರದ ಅಭಿವೃದ್ಧಿಗಾಗಿ ನಾವೆಲ್ಲ ಒಗ್ಗೂಡಿದ್ದೇವೆ. ಹೀಗಾಗಿ ಡಬಲ್‌ ಎಂಜಿನ್‌ ಸರ್ಕಾರ ಈಗ ತ್ರಿಬಲ್‌ ಎಂಜಿನ್‌ ಆಗಿದೆ ಎಂದು ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಅಭಿಪ್ರಾಯಪಟ್ಟಿದ್ದಾರೆ.
ಮಹಾರಾಷ್ಟ್ರ ಸರ್ಕಾರದ ಉಪಮುಖ್ಯಮಂತ್ರಿಯಾಗಿ ಎನ್‌ಸಿಪಿ ಅಜಿತ್‌ ಪವಾರ್‌ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಅಜಿತ್ ಪವಾರ್ ಅವರನ್ನು ನಾನು ಸ್ವಾಗತಿಸುತ್ತೇನೆ. ಅವರಿಂದ ನಮ್ಮ ಸರ್ಕಾರ ಮತ್ತಷ್ಟು ಬಲ ಬಂದಿದೆ ಎಂದರು.