ಅಯೋಧ್ಯೆಯಲ್ಲಿ ಸುತ್ತೂರು ಶಾಖಾ ಮಠ

Advertisement

ಮೈಸೂರು(ಸುತ್ತೂರು): ಅಯೋಧ್ಯೆಯಲ್ಲಿ ಸುತ್ತೂರಿನ ಶಾಖಾ ಮಠ ನಿರ್ಮಾಣ ಮಾಡಲು ಸ್ವಾಮೀಜಿ ಮುಂದಾಗಿರುವುದು ಅಭಿನಂದನೀಯ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 24 ಮಠಾಧೀಶರೂ ಈ ಮಠದಲ್ಲಿ ಪೀಠಾಧಿಪತಿಗಳಾಗಿ ನಿಸ್ವಾರ್ಥ ಸೇವೆ ಸಲ್ಲಿಸಿದ್ದಾರೆ. ಅವರನ್ನೆಲ್ಲರನ್ನು ನಾನು ಸ್ಮರಿಸುತ್ತೇನೆ. ಲಕ್ಷಾಂತರ ಜನರ ಮನಸ್ಸಲ್ಲಿ ಒಂದು ಬೆಳಕನ್ನು ಚೆಲ್ಲುವ ಕೆಲಸವನ್ನು ಮಾಡಿದ್ದಾರೆ. ಬಿಜೆಪಿ ಅವರ ಈ ಸೇವೆ ಹಾಗೂ ಕೊಡುಗೆಯನ್ನು ಸದಾ ಗುರುತಿಸುತ್ತದೆ ಎಂದರು.