ಹುಬ್ಬಳ್ಳಿ: ಹುಬ್ಬಳ್ಳಿ ಹಾಗೂ ಧಾರವಾಡದಲ್ಲಿ ಕೆಲ ವಾರ್ಡ್ಗಳ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ವಾರಕೊಮ್ಮೆ ಬಿಡುತ್ತಿದ್ದ ನೀರು, ಈಗ 15 ದಿನಗಳಾದರೂ ನೀರು ಬರುತ್ತಿಲ್ಲ ಎಂದು ಇಂದು ಹುಬ್ಬಳ್ಳಿಯ ಕಿತ್ತೂರ ರಾಣಿ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ಮಾಡಲಾಯಿತು.
ಅಸಮರ್ಪಕ ಕುಡಿಯುವ ನೀರು ಪೂರೈಕೆಗಾಗಿ ರಜತ ಉಳ್ಳಾಗಡ್ಡಿಮಠ ನೇತೃತ್ವದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಖಾಲಿ ಕೊಡ ಪ್ರದರ್ಶನ ಮಾಡುವ ಮುಖಾಂತರ ಪ್ರತಿಭಟನೆ ನಡೆಸಿದರು.