ಇಬ್ಬರು ಮಹಾನುಭಾವರಿಂದ ರಾಜ್ಯ ಹಾಳಾಗಿದೆ

Advertisement

ಬೆಳಗಾವಿ: ದೆಹಲಿಗೆ ಹೋಗಿ ಕರ್ನಾಟಕದಲ್ಲಿ ಏನು ನಡೆಯುತ್ತಿದೆ ಹೇಳ್ತೀನಿ. ಇಬ್ಬರು ಮಹಾನುಭಾವರಿಂದ ರಾಜ್ಯ ಹಾಳಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿಗೆ ಹೋಗ್ತೀನಿ. ದೆಹಲಿಯಿಂದ ಕರೆ ಬರಬೇಕಿದೆ, ಬರುತ್ತೆ. ಮಂಗಳವಾರ ಕೇಂದ್ರ ಕಚೇರಿಯಿಂದ ಸೂಚನೆ ಕೊಟ್ಟಿದ್ದಾರೆ. ಹೈಕಮಾಂಡ್ ಕರೆ ಬಂದ ಕೂಡಲೇ ದೆಹಲಿಗೆ ಹೋಗ್ತೀನಿ. ರಾಷ್ಟ್ರೀಯ ಅಧ್ಯಕ್ಷ ಹಾಗೂ ಗೃಹ ಸಚಿವರನ್ನು ಭೇಟಿ ಮಾಡುತ್ತೇನೆ. ಸೋಮಣ್ಣ ದೆಹಲಿಗೆ ಹೋಗುವ ಬಗ್ಗೆ ಮಾಹಿತಿ ಇಲ್ಲ. ಆದರೆ ನಾನು ದೆಹಲಿಗೆ ಹೋಗುವುದು ನಿಶ್ಚಿತ ಎಂದರು. ಒಬ್ಬ ದೆಹಲಿಯವನು ಇನ್ನೊಬ್ಬ ಕರ್ನಾಟಕದವನಿಂದ ರಾಜ್ಯ ಹಾಳಾಗಿದೆ ಅದನ್ನ ಹೇಳ್ತೀನಿ ಎಂದರು. ಇನ್ನು ಇದೇ ವೇಳೆ ವಿಪಕ್ಷ ಉಪನಾಯಕನಾಗಿ ಅರವಿಂದ್ ಬೆಲ್ಲದ್ ಆಯ್ಕೆ ಮಾಡುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ವಿಧಾನಸಭೆ ವಿಪಕ್ಷ ಉಪನಾಯಕನಿಗೆ ಯಾವ ಪವರ್ ಇರಲ್ಲ. ಏನೋ ಕೊಡಬೇಕೆಂದು ಕೊಡುತ್ತಿರಬೇಕು ಅಷ್ಟೇ. ಎಲ್ಲಾ ತೀರ್ಮಾನ ವಿಪಕ್ಷ ನಾಯಕ, ಅಧ್ಯಕ್ಷರು ತೆಗೆದುಕೊಳ್ಳುತ್ತಾರೆ. ಉಪನಾಯಕ ಅಂದ್ರೆ ವಿಪಕ್ಷ ನಾಯಕನ ಬಳಿ ಕೂರಬೇಕು ಅಷ್ಟೇ. ಈಗ ಡೆಪ್ಯೂಟಿ ಸ್ಪೀಕರ್ ಇಲ್ವಾ ಅದೇ ರೀತಿ ಕೂರಬೇಕು ಅಷ್ಟೇ. ಉಪನಾಯಕನಿಗೆ ಸಮಾಜದಲ್ಲೂ ಗೌರವ ಸಿಗಲ್ಲ. ನನ್ನ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ ಎಂದರು