ಎರಡನೇ ಸುತ್ತಿನ ಪ್ರಚಾರ ಮುಗಿಸಿ ದೆಹಲಿಯತ್ತ ಮೋದಿ

Advertisement

ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ವಿಧಾನಸಭೆ ಚುನಾವಣೆಯ ಎರಡನೇ ಸುತ್ತಿನ ಪ್ರಚಾರ ಮುಗಿಸಿ ದೆಹಲಿಗೆ ಹಿಂತಿರುಗಿದರು.
ಬುಧವಾರ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿದರು. ಹೋದಲೆಲ್ಲ ಬಜರಂಗಿಗೆ ಜೈಕಾರ ಹಾಕಿದ ಮೋದಿ, ಈ ಬಾರಿಯ ನಿರ್ಧಾರ ಬಹುಮತದ ಬಿಜೆಪಿ ಸರ್ಕಾರ ಎನ್ನುತ್ತಾ ಕರ್ನಾಟಕ ಅಭಿವೃದ್ಧಿಗಾಗಿ ಬಿಜೆಪಿ ಬೆಂಬಲಿಸಿ ಎಂದು ಕೋರಿದರು.