ಎರಡು ಬಾರಿ ಸ್ಪರ್ಧಿಸಿ ಕರ್ತವ್ಯ ನಿರ್ವಹಿಸಿದ್ದೇನೆ, ಇನ್ನು…

Advertisement

ಮಂಗಳೂರು: ಈ ಬಾರಿ ಚುನಾವಣೆಗೆ ಸ್ಪರ್ಧಿಸುವ ಯಾವುದೇ ಇಚ್ಛೆ ಇಲ್ಲ ಎಂದು ಸಚಿವ ಕೃಷ್ಣ ಭೈರೇಗೌಡರು ತಿಳಿಸಿದ್ದಾರೆ
ಮಂಗಳೂರಿನಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿರುವ ಅವರು ನಾನು ಈಗಾಗಲೇ ಎರಡು ಬಾರಿ ಲೋಕಸಭೆಗೆ ಸ್ಪರ್ಧಿಸಿದ್ದೇನೆ. ಮೊದಲ ಬಾರಿ 2009 ರಲ್ಲಿ ನಾನು ಶಾಸಕನಾಗಿದ್ರೂ ಪಕ್ಷದ ಸೂಚನೆಯಂತೆ ಸ್ಪರ್ಧಿಸಿದ್ದೆ. ಆ ಸಂದರ್ಭದಲ್ಲಿ ಕೇವಲ ಪಕ್ಷದ ಸೂಚನೆ ಪಾಲಿಸಲು ಸ್ಪರ್ಧಿಸಿದ್ದೆ. 2019 ರ ಚುನಾವಣೆಯಲ್ಲೂ ಕೊನೆ ಕ್ಷಣದಲ್ಲಿ ಪಕ್ಷದ ಸೂಚನೆಗೆ ಗೌರವ ಕೊಟ್ಟು‌ ಸ್ಪರ್ಧಿಸಿದ್ದೆ. ಎರಡು ಬಾರಿ ಚುನಾವಣೆಯಲ್ಲಿ ಸೋತಿದ್ದೇನೆ. ಪಕ್ಷ ಹೇಳಿದಂತೆ ಎರಡು ಬಾರಿ ಸ್ಪರ್ಧಿಸಿ ಕರ್ತವ್ಯ ನಿರ್ವಹಿಸಿದ್ದೇನೆ ಎಂದರು. ಈ ಬಾರಿ ಚುನಾವಣೆಗೆ ಸ್ಪರ್ಧಿಸುವ ಯಾವುದೇ ಇಚ್ಛೆ ಇಲ್ಲ. ಈಗಾಗಲೇ ಪಕ್ಷದ ವರಿಷ್ಠರಿಗೆ ನನ್ನ ಅಭಿಪ್ರಾಯವನ್ನು ತಿಳಿಸಿದ್ದೇನೆ. ವರಿಷ್ಠರೂ ಕೂಡ ನನ್ನ ಅಭಿಪ್ರಾಯಕ್ಕೆ ಗೌರವ ಕೊಟ್ಟಿದ್ದಾರೆ ಅಂತ ತಿಳಿದಿದ್ದೇನೆ. ನಾನು ಚುನಾವಣೆಗೆ ಸ್ಪರ್ಧಿಸುವ ಪ್ರಶ್ನೇ ಉದ್ಭವಿಸುವುದಿಲ್ಲ ಎಂದರು.