ಎಲ್ಲಡೆ ಕನ್ನಡದ ಕಂಪು ಹರಡಿಸಬೇಕು: ಬಸವರಾಜ ಬೊಮ್ಮಾಯಿ

ಹಾವೇರಿ
Advertisement

ಹಾವೇರಿ: ಸೋಮವಾರ ಸಂಜೆ ದೆಹಲಿಗೆ ತೆರಳಿ ಹೈಕಮಾಂಡ್ ಭೇಟಿ ಮಾಡಲಿದ್ದು, ಈ ವೇಳೆ ಚುನಾವಣೆ ತಯಾರಿ ಕುರಿತು ಚರ್ಚಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಶಿಗ್ಗಾವಿಯಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳು, ಕೆಲವು ಸ್ಕೀಂಗಳು ಸರಿಯಾಗಿ ನಡೆಯುತ್ತಿವೆ. ದೆಹಲಿಯಲ್ಲಿ ಬಿಜೆಪಿ ಘಟಕದ ಅದ್ಯಕ್ಷರ ಜೊತೆ ಚರ್ಚೆ ಮಾಡಲಾಗುವುದು. ಅಲ್ಲಿ ಏನು ಚರ್ಚೆ ನಡೆಯುತ್ತೋ ಅದನ್ನು ಬಳಿಕವೇ ಹೇಳುತ್ತೇನೆ ಎಂದರು.
ಫೆಬ್ರವರಿಯಲ್ಲಿ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದೇನೆ. ಈಗಾಗಲೇ ಹಣಕಾಸು ಇಲಾಖೆ ಜೊತೆ ಎರಡು ಸುತ್ತಿನ ಮಾತುಕತೆ ನಡೆಸಲಾಗಿದೆ. ಎಲ್ಲಾ ಇಲಾಖೆಯವರ ಜೊತೆಗೂ ಚರ್ಚೆ ಮಾಡಲಿದ್ದೇನೆ. ಬಜೆಟ್ ಎಲ್ಲಾ ಸಿದ್ಧತೆಗಳನ್ನು ಮುಂದಿನ ಜನೆವರಿ ತಿಂಗಳಿಂದಲೇ ಶುರು ಮಾಡಲಿದ್ದೇನೆ ಎಂದರು.
ಕೊರೊನಾ ಹಿನ್ನೆಲೆ ಟೆಸ್ಟ್‌ಗಳನ್ನು ಹೆಚ್ಚಿಸುತ್ತೇವೆ, ಬೂಸ್ಟರ್ ಡೋಸ್ ಕೂಡಾ ಜಾಸ್ತಿ ಮಾಡ್ತಿದ್ದೇವೆ. ಆಸ್ಪತ್ರೆಗಳಲ್ಲಿ ಮೂಲಭೂತ ಸೌಕರ್ಯಗಳು, ತಂತ್ರಜ್ಞಾನಗಳನ್ನು ಅಳವಡಿಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯ ಮಾಡ್ತೀದಿವಿ. ಏರ್ ಪೋರ್ಟ್ ಹಾಗೂ ಬಸ್ ಸ್ಟಾಪ್ ಗಳಲ್ಲಿ ನಿಗಾ ಇಡಲು ಸೂಚನೆ ನೀಡಿದ್ದೇನೆ ಎಂದರು.
86ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕೊರೋನಾ ಭೀತಿ ವಿಚಾರ, ಓಪನ್ ಡೋರ್‌ನಲ್ಲಿ ಸಮ್ಮೇಳನ ನಡೆಯುವುದರಿಂದ ಮುಂಜಾಗೃತಾ ಕ್ರಮ ತೆಎದುಕೊಳ್ಳಲು ಹೇಳಿದ್ದೇನೆ. ಮಾಸ್ಕ್ , ಸ್ಯಾನಿಟೈಸರ್, ಅಂತರ ಕಾಪಾಡಲು ಮಾರ್ಗಸೂಚಿಗಳನ್ನು ಪಾಲನೆ‌ ಮಾಡಲಾಗುತ್ತ ಎಂದರು. ಒಕ್ಕಲಿಗ ಹಾಗೂ ಪಂಚಮಸಾಲಿ ಸಮುದಾಯಗಳಿಗೆ ಮೀಸಲಾತಿ ವಿಚಾರಕ್ಕೆ ಕುರಿತು ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಈಗಾಗಲೇ ಎಲ್ಲಾ ಮಟ್ಟದಲ್ಲಿ ಚರ್ಚೆ ಆಗಿದೆ ಎಂದರು.
ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ:
ಹಾವೇರಿಯಲ್ಲಿ ಜ.6ರಿಂದ 8ವರೆಗೆ ನಡೆಯುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ಬಿಡುಗಡೆಗೊಳಿಸಿದರು.
ಬಳಿಕ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸಬೇಕು. ಎಲ್ಲಡೆ ಕನ್ನಡದ ಕಂಪು ಹರಡಿಸಬೇಕು. ಇತರೆ ಸಮ್ಮೇಳನಕ್ಕಿಂತ ಈ ಸಮ್ಮೇಳನ ಉತ್ಕೃಷ್ಟವಾಗಿರುತ್ತದೆ. ಕನ್ನಡ ಭಾಷೆ, ನೆಲ,ಜಲ ಹಾಗೂ ಜನರನ್ನು ಯಾರು ಮುಟ್ಟಲು ಸಾಧ್ಯವಿಲ್ಲ. ಕನ್ನಡ ನಾಡು ಶ್ರೀಮಂತ ನಾಡು. ಕನ್ನಡ, ಕನ್ನಡಿಗರ ಸಮಸ್ಯೆಗಳನ್ನು ಸಮ್ಮೇಳನದಲ್ಲಿ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು. ಇದು ಎಲ್ಲ ಕನ್ನಡಿಗರ ಕಾರ್ಯಕ್ರಮವಾಗಿದ್ದು ಎಲ್ಲರೂ ಆಗಮಿಸುವ ಮೂಲಕ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು.