ಎಲ್ಲರಿಂದ ಅಂತರ ಕಾಯ್ದುಕೊಂಡ ಸಂಸದ ಅನಂತಕುಮಾರ್ ಹೆಗಡೆ

Advertisement

ಶಿರಸಿ: ನಾಲ್ಕು ವರ್ಷಗಳಿಂದ ಕ್ಷೇತ್ರದ ಯಾವುದೇ ಕಾರ್ಯಕ್ರಮ, ಅಭಿವೃದ್ಧಿಯಲ್ಲಿ ಪಾಲ್ಗೊಳ್ಳದೇ ಪಕ್ಷ, ಕಾರ್ಯಕರ್ತರು, ವ್ಯವಸ್ಥೆ ಎಲ್ಲದರಿಂದ ದೂರ ಕಾಯ್ದುಕೊಂಡಿದ್ದ ಸಂಸದ ಅನಂತಕುಮಾರ ಹೆಗಡೆ ಮತ್ತು ಅವರ ಅಭಿಮಾನಿ ಬಳಗ ಕಳೆದ ವಿಧಾನಸಭೆ ಚುನಾವಣೆಯಿಂದಲೂ ಬಿಜೆಪಿಗೆ ತಲೆನೋವಾಗಿ ಮಾರ್ಪಟ್ಟಿದೆ. ಈಗ ಲೋಕಸಭೆ ಚುನಾವಣೆಯಲ್ಲಿ ಪಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ಟಿಕೆಟ್ ನೀಡಿರುವುದು ಸಂಸದರಿಗೆ ಹಿನ್ನಡೆಯಾದಂತಾಗಿದೆ.
ಇದನ್ನು ಸಹಿಸದ ಸಂಸದರ ಬಳಗ ಈಗ ಪಕ್ಷದ ಚಟುವಟಿಕೆಯಿಂದಲೂ ದೂರ ಉಳಿದಿದ್ದಾರೆ. ಕಳೆದ ಎರಡು ದಿನಗಳಿಂದ ಅಂತೆಕಂತೆಗಳ ಕಥೆ ಹರಿದಾಡುತ್ತಿದೆ. ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಪಕ್ಷದಿಂದ ಘೋಷಿಸಲ್ಪಟ್ಟಿರುವ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸಂಸದರಾಗಿರುವ ಅನಂತಕುಮಾರ ಹೆಗಡೆ ಅವರನ್ನು ಸಂಪರ್ಕಿಸುವುದಾಗಿ ಹೇಳಿದ್ದರೂ, ಸಂಸದರು ಅವರ ಸಂಪರ್ಕಕ್ಕೆ ಸಿಗದೇ ತಪ್ಪಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.