ಎಲ್ ಎಲ್ ಸಿ ಕಾಲುವೆಯ ದುರಸ್ತಿ ಕಾರ್ಯ ಪೂರ್ಣ

ರಾಮಲು
Advertisement

ಬೈರದೇವನಹಳ್ಳಿ ಎಲ್ ಎಲ್ ಸಿ ಕಾಲುವೆಯ ದುರಸ್ತಿ ಕಾರ್ಯ ಪೂರ್ಣಗೊಂಡಿದ್ದು, ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದ ಶ್ರೀ ರಾಮಲು ಅವರು .ಎರಡು ದಿನಗಳಿಂದ ಖುದ್ದು ನಾನೇ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದರಿಂದ ಕಾಲುವೆಯ ದುರಸ್ತಿ ಕಾರ್ಯ ನಿಗಧಿತ ಅವಧಿಗಿಂತ ಮೊದಲೇ ಪೂರ್ಣಗೊಂಡಿದ್ದು, ಇದರಿಂದಾಗಿ ಈ ಭಾಗದ ಸಾವಿರಾರು ರೈತರ ಮೊಗದಲ್ಲಿ ಮಂದಹಾಸ ಮೂಡಿರುವುದು ವೈಯಕ್ತಿಕವಾಗಿ ನನಗೂ ತುಂಬಾ ಖುಷಿ ತಂದಿದೆ. ಕಳೆದ 20 ದಿನಗಳಿಂದ ನೀರು ಹರಿಯದ ಪರಿಣಾಮ ಈ ಭಾಗದ ರೈತರು ಬೆಳೆದಿದ್ದ ಬೆಳೆಗಳು ಒಣಗಿ‌ ಹೋಗುವ ಆತಂಕ ಎದುರಾಗಿತ್ತು.‌ ಅಧಿಕಾರಿಗಳ ಇಚ್ಛಾಶಕ್ತಿ, ಕಾರ್ಮಿಕರ ಸತತ ಪರಿಶ್ರಮದಿಂದ ಕಾಲುವೆಯ ದುರಸ್ತಿ ಕಾರ್ಯವನ್ನು ಮುಗಿಸಿಕೊಟ್ಡಿದ್ದಕ್ಕೆ ಅಭಿನಂದನೆಗಳನ್ನು ಸಲ್ಲಿಸುವೆ. ಎಂದು ಸಾಮಾಜಿಕ ಜಾಲತಾಣದ ಮೂಲಕ ಅಭಿನಂದನೆ ತಿಳಿಸಿದ್ದಾರೆ.