ಐಟಿ ಕಂಪನಿಗಳಿಂದ ಸಿಎಂಗೆ ಎಚ್ಚರಿಕೆ

Advertisement

ಬೆಂಗಳೂರು : ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಅವಾಂತರಗಳೇ ಸೃಷ್ಟಿಯಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ಥಗೊಳ್ಳುತ್ತಿದೆ.

ವರುಣನ ಆರ್ಭಟಕ್ಕೆ ಜನರು ಮಾತ್ರವಲ್ಲದೆ ದೊಡ್ಡದೊಡ್ಡ ಐಟಿ ಕಂಪನಿಗಳು ಕೂಡ ಬೇಸತ್ತಿದೆ. ಸರಿಯಾದ ಮೂಲಸೌಕರ್ಯಗಳಿಲ್ಲದೆ ಮಳೆ ಸಂದರ್ಭದಲ್ಲಿ ಅನೇಕ ರೀತಿಯ ಸಮಸ್ಯೆಗಳನ್ನು ಎದುರಿಸುವ ಮೂಲಕ ನಷ್ಟವನ್ನು ಅನುಭವಿಸುವಂತಾಗಿದೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಹೊರ ವರ್ತುಲ ರಸ್ತೆ ಕಂಪನಿಗಳ ಸಂಘ, ಮೂಲಸೌಕರ್ಯ ಸುಧಾರಿಸದಿದ್ದರೆ ಐಟಿ ಕಂಪನಿಗಳನ್ನು ಸ್ಥಳಾಂತರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.