ಕಲುಷಿತ ನೀರು ಪ್ರಕರಣ: ಇಬ್ಬರ ಅಮಾನತು

Advertisement

ಚಿತ್ರದುರ್ಗ: ಕಲುಷಿತ ನೀರು ಪ್ರಕರಣಕ್ಕೆ ಇಬ್ಬರನ್ನು
ಸೇವೆಯಿಂದ ಅಮಾನತುಗೊಳಿಸಿದ ಘಟನೆ ನಡೆದಿದೆ, ಚಿತ್ರದುರ್ಗ ಜಿಲ್ಲೆಯ ಕವಾಡಿಗರಹಟ್ಟಿಯ ಕಲುಷಿತ ನೀರಿನ ಪ್ರಕರಣಕ್ಕೆ ನಗರಸಭೆಯ ಸಹಾಯಕ ಕಾರ್ಯಪಾಲಕ ಮಂಜುನಾಥ ಆರ್.ಗಿರಡ್ಡಿ, ಕಿರಿಯದಲ್ಲಿ ಎಸ್.ಆರ್.ಕಿರಣ್ ಕುಮಾರ್ ಎಂಬುವವರ ಸೇವೆಯಿಂದ ಅಮಾನತುಗೊಂಡಿದ್ದು, ಈ ಕುರಿತು ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ. ಇಬ್ಬರ ವಿರುದ್ಧ ಇಲಾಖಾ ವಿಚಾರಣೆ ಕಾಯ್ದಿರಿಸಿ ಅಮಾನತುಗೊಳಿಸಲಾಗಿದೆ.