ಕಲ್ಕಿ ಧಾಮದ ಶಂಕುಸ್ಥಾಪನೆ: ಪ್ರಧಾನಿ ಮೋದಿಗೆ ಆಹ್ವಾನ ನೀಡಿದ ಕಾಂಗ್ರೆಸ್ ನಾಯಕ

Advertisement

ನವದೆಹಲಿ: ಫೆಬ್ರವರಿ 19 ರಂದು ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ನಡೆಯಲಿರುವ ಶ್ರೀ ಕಲ್ಕಿ ಧಾಮದ ಶಂಕುಸ್ಥಾಪನೆ ಕಾಂಗ್ರೆಸ್ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ ಸಮಾರಂಭಕ್ಕೆ ಪ್ರಧಾನಿ ಮೋದಿಯನ್ನು ಭೇಟಿಯಾಗಿ ಆಹ್ವಾನಿಸಿದದ್ದಾರೆ.
ಈ ಕುರಿತು ಆಚಾರ್ಯ ಪ್ರಮೋದ್ ಅವರು ಸಾಮಾಜಿಕ ಜಾಲತಾಣದಲ್ಲಿ ಚಿತ್ರದೊಂದಿಗೆ ಪೋಸ್ಟ್‌ ಮಾಡಿದ್ದಾರೆ. ಇನ್ನು ಈ ಪೋಸ್ಟ್‌ಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ ನೀಡಿದ್ದು ‘ನಂಬಿಕೆ ಮತ್ತು ಭಕ್ತಿಗೆ ಸಂಬಂಧಿಸಿದ ಈ ಪವಿತ್ರ ಸಂದರ್ಭದಲ್ಲಿ ಭಾಗವಾಗುವುದು ನನಗೆ ಸಿಕ್ಕ ಒಂದು ಸೌಭಾಗ್ಯ. ಆಚಾರ್ಯ ಪ್ರಮೋದ್ ಜೀ ಅವರೇ ನಿಮಗೆ ಆಹ್ವಾನ ನೀಡಿದ್ದಕ್ಕಾಗಿ ಹೃತ್ಪೂರ್ವಕ ಕೃತಜ್ಞತೆಗಳು ಎಂದಿದ್ದಾರೆ.