ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಕೃಷ್ಣ ಭೈರೇಗೌಡ ವಿಶ್ವಾಸ

Advertisement

ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಸಿಗಲಿದೆ. ನಾವೇ ಸರ್ಕಾರ ರಚಿಸುತ್ತೇವೆ ಎಂದು ಕಾಂಗ್ರೆಸ್‌ ನಾಯಕ ಕೃಷ್ಣ ಭೈರೇಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಬಿಜೆಪಿ ಸರ್ಕಾರದಿಂದ ಜನ ಬೇಸತ್ತಿದ್ದರು. ಈ ಬಾರಿ ನಮಗೆ ಬಹುಮತ ಬರಲಿದೆ. ಫಲಿತಾಂಶದ ಬಳಿಕ ಎಲ್ಲ ಶಾಸಕರ ಅಭಿಪ್ರಾಯ ಪಡೆದು ಚರ್ಚಿಸಿದ ಬಳಿಕ ಹೈಕಮಾಂಡ್‌ ಮುಖ್ಯಮಂತ್ರಿ ಯಾರಾಗಬೇಕೆಂದು ತಿರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.
ಇನ್ನು ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ ನಡುವೆ ಯಾವುದೇ ಕಿತ್ತಾಟ ಇಲ್ಲ. ಇಬ್ಬರೂ ಸಿಎಂ ಗಾದಿಗೆ ಅರ್ಹರಿದ್ದಾರೆ ಎಂದರು.