ಕಾಂಗ್ರೆಸ್ ನಾಯಕರಿಗೆ ನಡುಕ ಶುರುವಾಗಿದೆ

Advertisement

ಗೋಕಾಕ: ಬೆಳಗಾವಿಯಲ್ಲಿ ನಡೆದ ಪ್ರಧಾನಿ ಮೋದಿಯವರ ಕಾರ್ಯಕ್ರಮದಲ್ಲಿ ಭಾಗವಹಿಸಿದ ಜನತೆಯನ್ನು ಕಂಡು ಕಾಂಗ್ರೆಸ್ ಅಭ್ಯರ್ಥಿ ಹಾಗೂ ಕಾಂಗ್ರೆಸ್ ನಾಯಕರಿಗೆ ನಡುಕ ಶುರುವಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ಹೇಳಿದರು.
ಸೋಮವಾರ ಖನಗಾಂವ ಗ್ರಾಮದಲ್ಲಿ ಲೋಕಸಭಾ ಚುನಾವಣೆ ಪ್ರಚಾರಾರ್ಥ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ಪ್ರಧಾನಿ ಮೋದಿಯವರ ಸಮರ್ಥ ನಾಯಕತ್ವ ಕಂಡು ಕಂಗಾಲಾಗಿರುವ ಕಾಂಗ್ರೆಸ್ ಪಕ್ಷ ಸುಳ್ಳು ಭರವಸೆಗಳನ್ನು ನೀಡುತ್ತಿದೆ. ಮೋದಿಯವರಂತಹ ನಾಯಕತ್ವ ದೇಶಕ್ಕೆ ಬೇಕಿದೆ. ಕಳೆದ ಹತ್ತು ವರ್ಷಗಳಲ್ಲಿ ಅವರು ಮಾಡಿರುವ ಸಾಧನೆಗಳು ನಮ್ಮ ಕಣ್ಣ ಮುಂದಿದೆ. ಕಾಂಗ್ರೆಸ್ ಮೋದಿಯರನ್ನು ಟೀಕೆ ಮಾಡುವದು ಬಿಟ್ಟು ಬೇರೆ ಯಾವುದೇ ಕೆಲಸ ಇಲ್ಲ. ಮೋದಿಯವರು ಪ್ರಧಾನಿಯಾಗುವ ಮುಂಚೆ ಭಾರತ ದೇಶ ಆರ್ಥಿಕ ಪ್ರಗತಿಯಲ್ಲಿ ೧೪ನೇ ಸ್ಥಾನದಲ್ಲಿತ್ತು. ಸದ್ಯ ೫ನೇ ಸ್ಥಾನಕ್ಕೆ ಬಂದಿದ್ದು, ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ನಂತರ ೩ನೇ ಸ್ಥಾನ ತಲುಪಲಿದೆ. ಮುಂದಿನ ದಿನಗಳಲ್ಲಿ ದೇಶದ ಆರ್ಥಿಕತೆ ೧ನೇ ಸ್ಥಾನಕ್ಕೆ ಬರಲಿದೆ ವಿಶ್ವಾಸ ವ್ಯಕ್ತಪಡಿಸಿದರು.
ಜಗತ್ತಿನ ಜನಪ್ರಿಯ ವ್ಯಕ್ತಿ ಮೋದಿ. ಮೋದಿಯವರನ್ನು ಅಲುಗಾಡಿಸಲು ಕಾಂಗ್ರೆಸ್‌ನಿಂದ ಸಾಧ್ಯವಿಲ್ಲ. ಜನರ ದುಡಿದ ಆಸ್ತಿಯನ್ನು ಕಬಳಿಸಲು ಕಾಂಗ್ರೆಸ್ ಪ್ಲ್ಯಾನ್ ಮಾಡಿದೆ. ದೇಶದ ಅಭಿವೃದ್ಧಿಗೆ ಬಿಜೆಪಿ ಸರಕಾರದ ಪಾತ್ರ ಮಹತ್ವದ್ದಾಗಿದೆ ಎಂದರು.