ಕಾನೂನಿನಲ್ಲಿ ಅವಕಾಶವಿದ್ದರೆ ಗಲ್ಲಿಗೇರಿಸಲಿ

mb patil
Advertisement

ಬೆಂಗಳೂರು: ಅಪರಾಧಿ ಯಾರೇ ಇದ್ದರು ಅವರಿಗೆ ಕಠಿಣ ಶಿಕ್ಷೆಯಾಗಲೇಬೇಕು ಎಂದು ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್ ಅವರ ಹತ್ಯೆ ಅತ್ಯಂತ ಹೇಯ ಮತ್ತು ಬರ್ಬರ ಕೃತ್ಯವಾಗಿದೆ. ಈ ದುರ್ಘಟನೆಯನ್ನು ಉಗ್ರವಾಗಿ ಖಂಡಿಸುತ್ತೇನೆ. ಅಪರಾಧಿ ಯಾರೇ ಇದ್ದರು ಅವರಿಗೆ ಕಠಿಣ ಶಿಕ್ಷೆಯಾಗಲೇಬೇಕು. ಪ್ರಕರಣವನ್ನು ತ್ವರಿತಗತಿ ನ್ಯಾಯಾಲಯಕ್ಕೆ ಒಪ್ಪಿಸಿ, ಕಾನೂನಿನಲ್ಲಿ ಅವಕಾಶವಿದ್ದರೆ ಗಲ್ಲಿಗೇರಿಸಬೇಕೆಂದು ಒತ್ತಾಯಿಸುತ್ತೇನೆ. ಮುಂದೆ ಎಂದೂ ಇಂತಹ ದುರ್ಘಟನೆಗಳು ಮರುಕಳಿಸಬಾರದು ಎಂದಿದ್ದಾರೆ.