ಕಾವೇರಿ ಕದನ : ಕರಾಳ ದಿನ: ಸೆಪ್ಟೆಂಬರ್ 23 ರಂದು ಮಂಡ್ಯ ಬಂದ್​

ಸಾಂದರ್ಬಿಕ ಚಿತ್ರ
ಸಾಂದರ್ಬಿಕ ಚಿತ್ರ
Advertisement

ಮಂಡ್ಯ: ಕಾವೇರಿ ನೀರು ವಿಚಾರವಾಗಿ ಸುಪ್ರೀಂ ಕೋರ್ಟ್ ತೀರ್ಪು ಹಿನ್ನೆಲೆಯಲ್ಲಿ ಸೆಪ್ಟೆಂಬರ್ 23 ರಂದು ಮಂಡ್ಯ ಬಂದ್​ಗೆ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಕರೆ ನೀಡಿದೆ. ಶುಕ್ರವಾರ ಮತ್ತೊಂದು ಸುತ್ತಿನ ಸಭೆ ಕರೆಯಲಾಗಿದ್ದು. ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು, ವರ್ತಕರು, ಸಂಘಟನೆಗಳ ಮುಖಂಡರನ್ನು ಈ ಸಭೆಗೆ ಕರೆಯಲಾಗಿದೆ. ಬಂದ್ ರೂಪುರೇಷೆ ಬಗ್ಗೆ ಚರ್ಚೆ ನಡೆಯಲಿದೆ.

ಕಾವೇರಿ ನೀರಿನ ವಿಚಾರವಾಗಿ ಸುಪ್ರೀಮ್ ಕೋರ್ಟಿನ ಅವೈಜ್ಞಾನಿಕ ತೀರ್ಪುನ್ನು ವಿರೋಧಿಸಿ ರೈತರು ನೆಡೆಸುತ್ತಿರುವ ಪ್ರತಿಭಟನೆಗೆ ಬೆಂಬಲವನ್ನು ಸೂಚಿಸಿ ನಾಳೆ 22/09/2022 ಮಂಡ್ಯ ನಗರಕ್ಕೆ ಖ್ಯಾತ ಚಲನಚಿತ್ರ ನಟರಾದ ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಷ್ ರವರು ಆಗಮಿಸಿ ಕಾವೇರಿ ಹೋರಾಟದಲ್ಲಿ ರೈತರೊಂದಿಗೆ ಭಾಗವಹಿಸಲಿದ್ದಾರೆ.