ಕುಕ್ಕರ್, ಐರನ್ ಬಾಕ್ಸ್ ಹಂಚಿಕೆಯಿಂದ ಗೆಲುವು ಸಾಧ್ಯವಾಗಿದೆ

Advertisement

ಬೆಂಗಳೂರು: ಕುಕ್ಕರ್, ಐರನ್ ಬಾಕ್ಸ್ ಹಂಚಿಕೆ ಮಾಡಿ ಸಿದ್ದರಾಮಯ್ಯ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ಅವರ ಪುತ್ರ ಡಾ. ಯತೀಂದ್ರ ಅವರು ಹೇಳಿದ್ದಾರೆ.
ನಂಜನಗೂಡು ತಾಲೂಕು ಮಡಿವಾಳ ಸಮುದಾಯದ ಭವನ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ ಅವರು, ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ವರುಣಾ ಕ್ಷೇತ್ರದ ಅಭ್ಯರ್ಥಿಯಾಗಿದ್ದ ಸಿದ್ದರಾಮಯ್ಯ ಅವರು “ಚುನಾವಣೆ ವೇಳೆ ಮಡಿವಾಳ ಸಮುದಾಯದ ಮತದಾರರಿಗೆ ಸಮುದಾಯದ ರಾಜ್ಯಾಧ್ಯಕ್ಷ ನಂಜಪ್ಪ ಕುಕ್ಕರ್‌, ಐರನ್‌ ಬಾಕ್ಸ್‌ ಕೊಡಲು ಸಿದ್ಧತೆ ಮಾಡಿಕೊಂಡಿದ್ದರು. ಆದರೆ, ಹಲವು ಕಾರಣಗಳಿಂದ 2-3 ಬಾರಿ ಮುಂದೂಡಲಾಗಿತ್ತು. ಬಳಿಕ ತಂದೆ ಸಿದ್ದರಾಮಯ್ಯನವರ ದಿನಾಂಕವನ್ನು ಪಡೆದು ತಂದೆಯವರ ಕೈಯಿಂದಲೇ ಕುಕ್ಕರ್‌ ಮತ್ತು ಐರನ್‌ ಬಾಕ್ಸ್‌ ಕೊಡಿಸಿದರು. ಹೀಗಾಗಿ ಮಡಿವಾಳ ಸಮುದಾಯದ ಹೆಚ್ಚು ಮತ ಬೀಳಲು ಕಾರಣವಾಯಿತು. ಮಡಿವಾಳ ಸಮುದಾಯ ಹೆಚ್ಚಿನ ಮತ ಕೊಟ್ಟಿದ್ದಕ್ಕೆ ನಿಮಗೆ ಧನ್ಯವಾದ’ ಎಂದು ಸಮಾರಂಭದಲ್ಲಿ ಯತೀಂದ್ರ ಮಾತನಾಡಿದ್ದಾರೆ.