ಕೃತಜ್ಞತೆ ಸಲ್ಲಿಸಿದ ಬಿಎಸ್‌ವೈ

Advertisement

ಶಿವಮೊಗ್ಗ ವಿಮಾನ ನಿಲ್ದಾಣ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನೆಗೆ ಆಗಮಿಸಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೂ ಹಾಗೂ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ ಜನತೆಗೆ ಬಿ.ಎಸ್.‌ ಯಡಿಯೂರಪ್ಪ ಕೃತಜ್ಞತೆ ಸಲ್ಲಿಸಿ ಟ್ವೀಟ್‌ ಮಾಡಿದ್ದಾರೆ. ಅವರ ಟ್ವೀಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ನನ್ನ ಹುಟ್ಟಿದ ದಿನದಂದೇ ಆಗಮಿಸಿ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿರುವುದು ನನಗೆ ಅತ್ಯಂತ ಹೆಮ್ಮೆ, ಸಂತಸವನ್ನು ಉಂಟುಮಾಡಿದೆ. ಶಿವಮೊಗ್ಗ ವಿಮಾನ ನಿಲ್ದಾಣ ಇಡೀ ಮಲೆನಾಡಿನ ಜನರ ಕನಸು ನನಸಾಗುವ ಸಂಕೇತ. ಇಂದಿನಿಂದ ಈ ಪ್ರದೇಶದಲ್ಲಿ ಅಭಿವೃದ್ಧಿ ಕಾರ್ಯಗಳು ಮತ್ತಷ್ಟು ವೇಗ ಪಡೆದುಕೊಳ್ಳಲಿದೆ. ನನ್ನ ಪಾಲಿಗೆ ಇದೊಂದು ಸಾರ್ಥಕತೆಯ ಕ್ಷಣ. ಶಾಸಕನಾಗಿ, ಸಂಸದನಾಗಿ, ಮುಖ್ಯಮಂತ್ರಿಯಾಗಿ ನಾಡಿಗೆ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟ ಪಕ್ಷಕ್ಕೆ ಹಾಗೂ ನಾಡಿನ ಜನತೆಗೆ ನಾನು ಸದಾ ಋಣಿ. ಅತಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಇಂದು ನನ್ನನ್ನು ಆಶೀರ್ವದಿಸಿದ ಜಿಲ್ಲೆಯ ಜನರಿಗೆ, ವಿಶೇಷವಾಗಿ ಶಿಕಾರಿಪುರದ ಜನತೆಗೆ ನನ್ನ ಕೃತಜ್ಞತೆಗಳು ಎಂದಿದ್ದಾರೆ.