ಕೊರೊನಾ ಸೋಂಕು; ಇಬ್ಬರ ಸಾವು

ಕೊರೊನಾ
Advertisement

ಹುಬ್ಬಳ್ಳಿ: ಕೊರೊನಾ ಸೋಂಕಿನಿಂದ ಜಿಲ್ಲೆಯಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ರವಿವಾರ ನಡೆದಿದೆ. ಶನಿವಾರವಷ್ಟೇ ಕೊರೊನಾದಿಂದ ನವನಗರದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು. ರವಿವಾರ ಮತ್ತೆ ಇಬ್ಬರು ಮೃತಪಟ್ಟಿದ್ದು, ಎರಡು ದಿನದಲ್ಲಿ ಮೂರು ಜನರು ಕೊರೊನಾಕ್ಕೆ ಬಲಿಯಾಗಿದ್ದಾರೆ.
ಧಾರವಾಡದ ಎಸ್‌ಡಿಎಂ ಮತ್ತು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಇಬ್ಬರು ಸಾವನ್ನಪ್ಪಿದ್ದಾರೆ. ಧಾರವಾಡದ ಮದಿಹಾಳ ಮತ್ತು ಕೊಪ್ಪಳದ ಕುಕನೂರು ಗ್ರಾಮದವರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ೪೪ ಕೊರೊನಾ ಸಕ್ರಿಯ ಪ್ರಕರಣಗಳಿವೆ. ಅದರಲ್ಲಿ ೧೩ ಪ್ರಕರಣಗಳು ರವಿವಾರ ಹೊಸದಾಗಿ ಪತ್ತೆಯಾಗಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಚಿಕಿತ್ಸೆಗೆ ದಾಖಲಾದವರಲ್ಲಿ ೨೩ ಜನ ಗುಣಮುಖರಾಗಿದ್ದಾರೆ. ಮೂವರು ತೀವ್ರ ನಿಗಾ ಘಟಕದಲ್ಲಿದ್ದಾರೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.