ಹಾವೇರಿ: ಗಂಗಾಮತ ಸಮುದಾಯವನ್ನು ಎಸ್ಟಿಗೆ ಸೇರಿಸುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಜಿಲ್ಲೆಯ ನರಸೀಪುರದಲ್ಲಿ ನಡೆದ ಅಂಬಿಗರ ಚೌಡಯ್ಯರ ಶರಣ ಸಂಸ್ಕೃತಿ ಉತ್ಸವದಲ್ಲಿ ಅವರು ಮಾತನಾಡಿ, ಎಸ್ಟಿಗೆ ಸೇರಿಸುವ ಫೈಲ್ ಕೇಂದ್ರದಲ್ಲಿ ಅಂತಿಮ ಹಂತಕ್ಕೆ ಬಂದಿದೆ. ಈ ಬಗ್ಗೆ ಸಂಬಂಧಪಟ್ಟ ಸಚಿವರ ಜೊತೆ ಮತ್ತೊಮ್ಮೆ ಮಾತನಾಡುತ್ತೇನೆ. ಆದಷ್ಟು ಬೇಗ ಗಂಗಾಮತ ಸಮುದಾಯವನ್ನು ಎಸ್ಟಿಗೆ ಸೇರಿಸುತ್ತೇನೆ. ಗಂಗಾಮತ ಪೀಠಕ್ಕೆ 10 ಕೋಟಿ ಕೊಡುವುದಾಗಿ ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಅದರ ಪೈಕಿ ಈಗಾಗಲೇ 5 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ಆದಷ್ಟು ಬೇಗ ಉಳಿದ 5 ಕೋಟಿ ರೂ. ಬಿಡುಗಡೆ ಮಾಡುತ್ತೇನೆ ಎಂದು ಹೇಳಿದರು.