ಗ್ಯಾರಂಟಿ ಯೋಜನೆಯಿಂದ ಜನರಿಗೆ ಅನುಕೂಲ

Advertisement

ಬೆಳಗಾವಿ(ಯಕ್ಸಂಬಾ): ಮತದಾರರು ದೇಶದ ಉಜ್ವಲ ಭವಿಷ್ಯಕ್ಕಾಗಿ ಕಾಂಗ್ರೆಸ್ ಪಕ್ಷಕ್ಕೆ ತಮ್ಮ ಮತ ನೀಡಿ ಪಕ್ಷದ ಅಭ್ಯರ್ಥಿ ಪ್ರಿಯಾಂಕಾ ಸತೀಶ ಜಾರಕಿಹೊಳಿ ಅವರನ್ನು ಆರಿಸಿ ತರಬೇಕು ಎಂದು
ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಹಾಗೂ ವಿಧಾನ ಪರಿಸತ್ ಸದಸ್ಯ ಪ್ರಕಾಶ ಹುಕ್ಕೇರಿ ಮನವಿ ಮಾಡಿದರು.
ಸಮೀಪದ ಜನವಾಡ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿಯವರ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಈಗಾಗಲೇ ರಾಜ್ಯ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರರವರ ನೇತೃತ್ವದಲ್ಲಿ ಘೋಷಿಸಿರುವ ಗ್ಯಾರಂಟಿ ಯೋಜನೆಗಳು ಚಾಲ್ತಿಯಿದ್ದು ಇದರಿಂದ ಸಾಮಾನ್ಯ ಜನರಿಗೆ ತುಂಬಾ ಅನುಕೂಲಕವಾಗಿದೆ ಎಂದರು.
ಕಾಂಗ್ರೆಸ್ ಪಕ್ಷದ ಯುವ ನೇತಾರ ರಾಹುಲ್ ಗಾಂಧಿಯವರು ೫ ಹೊಸ ಗ್ಯಾರಂಟಿ ಘೋಷಿಸಿದ್ದು ಬರುವ ಮೇ ೭ರಂದು ನಡೆಯಲಿರುವ ಲೋಕಸಭಾ ಚುನಾವಣೆಯಂದು ಹಸ್ತದ ಗುರ್ತಿಗೆ ತಮ್ಮ ಅಮೂಲ್ಯ ಮತ ನೀಡಿ, ಅಧಿಕ ಮತಗಳಿಂದ ಚುನಾಯಿತಗೊಳಿಸಬೇಕೆಂದರು.
೨೦೨೩ರ ವಿಧಾನಸಭೆ ಚುನಾವಣೆಯ ಪೂರ್ವದಲ್ಲಿ ಘೋಷಿಸಿದಂತೆ ಪಂಚ ಗ್ಯಾರಂಟಿ ಜಾರಿಗೆ ತಂದು ನುಡಿದಂತೆ ನಡೆಯುವ ಸರ್ಕಾರವೆಂದು ಸಾಬೀತುಪಡಿಸಿದ್ದು ಸರ್ಕಾರದ ಗ್ಯಾರಂಟಿಗಳು ಅಭ್ಯರ್ಥಿ ಗೆಲುವಿಗೆ ಸಹಕಾರಿಯಾಗಲಿದೆ. ೨೦೨೩ರ ವಿಧಾನಸಭೆ ಚುನಾವಣೆಯ ಪೂರ್ವದಲ್ಲಿ ಘೋಷಿಸಿದಂತೆ ಪಂಚ ಗ್ಯಾರಂಟಿಗಳನ್ನು ಜಾರಿಗೆ ತಂದು ನುಡಿದಂತೆ ನಡೆಯುವ ಸರ್ಕಾರವೆಂದು ಸಾಬೀತುಪಡಿಸಿದೆ ಎಂದರು.