ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ

Advertisement

ಅನಾರೋಗ್ಯದಿಂದ ಬಳಲುತ್ತಿದ್ದ ಶ್ರವಣಬೆಳಗೊಳದ ಜೈನಮಠದ ಪೀಠಾಧಿಪತಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ (73) ಇಂದು ವಿಧಿವಶರಾದರು.
ಅನಾರೋಗ್ಯದ ಹಿನ್ನೆಲೆಯಲ್ಲಿ ಸ್ವಾಮೀಜಿಯವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಿಸದೇ ಬೆಳಗ್ಗೆ ನಿಧನರಾಗಿದ್ದಾರೆ.
ಮೇ 3, 1949ರಲ್ಲಿ ಜನಿಸಿರುವ ಇವರು ನಾಲ್ಕು ಮಹಾಮಸ್ತಕಾಭಿಷೇಕದ ರೂವಾರಿಯಾಗಿದ್ದರು.