ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ

Advertisement

ವಿಜಯಪುರ: ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದ 50 ಜನ ಚುನಾವಣಾ ಅಧಿಕಾರಿಗಳಿದ್ದ ಸಿಬ್ಬಂದಿಗಳ ಬಸ್ ಪಲ್ಟಿಯಾದ ಘಟನೆ ನಡೆದಿದೆ, ಮುದ್ದೇಬಿಹಾಳದಿಂದ ಸಿಂದಗಿಗೆ ತೆರಳುತ್ತಿದ್ದ ವೇಳೆ ಮುದ್ದೇಬಿಹಾಳ ತಾಲೂಕಿನ ಹಳ್ಳೂರ ಕ್ರಾಸ್ ಬಳಿ ಘಟನೆ‌ ನಡೆದಿದ್ದು. ಬಸ್‌ನ ಆಕ್ಸೆಲ್ ಕಟ್ ಆಗಿ ಚಾಲಕನ ನಿಯಂತ್ರಣತಪ್ಪಿ ಬಸ್ ಪಲ್ಟಿಯಾಗಿದೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.