ಚುನಾವಣೆ ಮುಂದೂಡಿದರೆ ಜನ ಸುಮ್ಮನ್ನಿರಲ್ಲ

Advertisement

ಹುಬ್ಬಳ್ಳಿ: ಲೋಕಸಭಾ ಚುನಾವಣೆ ಸಮೀಸುತ್ತಿರುವುದರಿಂದ ಒಂದು ದೇಶ ಒಂದು ಚುನಾವಣೆ ಮಾಡಲು ಪ್ರಧಾನಿ ಮೋದಿ ಅವರು ಹೊರಟ್ಟಿದ್ದು, ಇರದಲ್ಲಿ ಸಾಕಷ್ಟು ಅನುಮಾನಗಳಿವೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಕೇಂದ್ರ ಸರ್ಕಾರ ವಿರುದ್ಧ ಹರಿಹಾಯ್ದರು.

ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಲ್ಕು ವರ್ಷ ಸುಮ್ಮನಿದ್ದ ಕೇಂದ್ರ ಸರ್ಕಾರ ಮಾಜಿ ರಾಷ್ಟ್ರ ಪತಿ ರಾಮನಾಥ ಕೋವಿಂದ ಅವರ ನೇತೃತ್ವದಲ್ಲಿ ಸಮಿತಿ ಮಾಡಿದ್ದು, ಅವರಿಗೆ ರಾಜಕೀಯ ವಾಸನೆ ಇದ್ದವರಾಗಿದ್ದಾರೆ. ಕೇಂದ್ರ ಸರ್ಕಾರದ ಲೋಕಸಭಾ ಅವಧಿ ವಿಸ್ತಾರ ಮಾಡಿ ಚುನಾವಣೆ ಮುಂದುಡುವ ದುರುದ್ದೇಶವಿದೆ ಎಂದರು.

ಮೋದಿ ಅವರು ಚುನಾವಣೆ ಮುಂದುಡುವುದು, ಸಂವಿಧಾನ ಬದಲಿಸಿ ಲೋಕಸಭಾ ಚುನಾವಣೆ ಮುಂದುಡಿದರೆ ಜನರು ಸುಮ್ಮನ್ನಿರಲ್ಲ. ಸಮಿತಿಯಲ್ಲಿ ಸುಪ್ರೀಂ ಕೋಟ್೯ ನ್ಯಾಯಾಧೀಶರು ನೇಮಕ ಮಾಡಬೇಕಿತ್ತು. ಪಕ್ಷಾತೀತ ವಿದ್ದ ಎಷ್ಟೊಂದು ಜನರಿದ್ದಾರೆ ಅಂತವರ ನೇಮಕ ಮಾಡಿಕೊಳ್ಳಬೇಕಿತ್ತು. ಕೇಂದ್ರ ಸರ್ಕಾರ ಹೆಜ್ಜೆಯಲ್ಲಿ ಸಾಕಷ್ಟು ಅನುಮಾನಗಳಿವೆ ಎಂದು ಹೇಳಿದರು.
ಕರ್ನಾಟಕ ಚುನಾವಣೆ ಬಳಿಕ ಬಿಜೆಪಿ ವಿಶ್ವಾಸ ಕಳೆದುಕೊಂಡಿದೆ. ರಾಜ್ಯದಲ್ಲಿ ಅವರ ಪರಿಸ್ಥಿತಿ ಹದಗೆಡುತ್ತಿದೆ. ಐದು ಗ್ಯಾರಂಟಿ ಯಶಸ್ಸು ನೋಡಿ ಕೇಂದ್ರ ಸರ್ಕಾರ ಭಯದಿಂದ ಬೆಲೆ ಇಳಿಕೆ ಮಾಡುತ್ತಿದೆ ಎಂದರು.

ಕಾವೇರಿ ರಾಜಕೀಯ ಮಾಡುತ್ತಿದೆ ದೇವೆಗೌಡರ ಹೇಳಿಕೆ ಪ್ರತಿಕ್ರಿಯಿಸಿ, ಕರ್ನಾಟಕ ಹಿತ ರಕ್ಷಣೆಗೆ ಕಾನೂನು ಹೋರಾಟ ಮಾಡಿದ್ದೇವೆ. ಹೋರಾಟ ಎಲ್ಲ ಪಕ್ಷ ಸಭೆ ಕರೆದು ಮಾರ್ಗದರ್ಶನ ಪಡೆದಿದ್ದೇವೆ. ಇದರಲ್ಲಿ ಯಾವುದೇ ರಾಜಕಾಣ ಮಾಡಿಲ್ಲ ಎಂದರು.

ಸಂಕಷ್ಟ ಸೂತ್ರ ಮಾಡುವುದು ಸರ್ಕಾರ ಉದ್ದೇಶವಿದೆ‌. ಬಿಜೆಪಿ ನಾಯಕರು ಕಾಂಗ್ರೆಸ್ ಬರಲು ಅಭಿಪ್ರಾಯ ಪಡುತ್ತಿದ್ದಾರೆ. ಸಮಾಜದಲ್ಲಿ ಬಡವರ ಪರದ ಮನಸ್ಥಿತಿ ಇರುವವರು ಪಕ್ಷಕ್ಕೆ ಬರುವವರು ಆಸಕ್ತರಾಗಿದ್ದಾರೆ. ಪಕ್ಷಕ್ಕೆ ಬಂದ ಸೇರಿಸಿಕೊಳ್ಳಲಾಗುವುದು ಎಂದು ತಿಳಿಸಿದರು.
ಮಹದಾಯಿ ಯೋಜನೆ ಅನುಷ್ಠಾನ ಬಿಜೆಪಿ ಭರವಸೆ ನೀಡಿದ್ದಾರೆ. ಅರಣ್ಯ ಇಲಾಖೆ ಅನುಮತಿ ಕೊಡಿಸಬೇಕು. ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಒತ್ತಡ ತರುತ್ತದೆ. ಬಿಜೆಪಿ ನುಡಿದಂತೆ ನಡೆಯಬೇಕು. ರಾಜ್ಯದ ಜನರ ಹಿತಕ್ಕಾಗಿ ಅನುಮತಿ ಕೊಡಿಸಬೇಕು ಎಂದು ಹೇಳಿದರು.