ಜನರ ಸಮಸ್ಯೆಗಳ ಪರಿಹಾರಕ್ಕೆ ಪಂಚರತ್ನ ರಥಯಾತ್ರೆ

Advertisement

ವಿಜಯಪುರ(ಬಸವನಬಾಗೇವಾಡಿ): ರಾಜ್ಯದ ಬಡ ಜನತೆಗೆ ಗುಣಮಟ್ಟದ ಶಿಕ್ಷಣ, ಉತ್ತಮ ಆರೋಗ್ಯ ಸೇವೆ, ರೈತರಿಗಾಗಿ ರೈತ ಚೈತ್ಯನ್ಯ ಯೋಜನೆ ಸೇರಿದಂತೆ ಹಲವಾರು ಜನಪರ ಯೋಜನೆಗಳೊಂದಿಗೆ ಪಂಚರತ್ನ ರಥಯಾತ್ರೆ ಆರಂಭವಾಗಿದೆ. ಇದರ ಸದುಪಯೋಗ ಪಡೆದುಕೊಳ್ಳುವುದು ರಾಜ್ಯದ ಜನರಿಗೆ ಬಿಟ್ಟಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಪಟ್ಟಣದ ಸಮೀಪದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಹತ್ತಿರ ಭಾನುವಾರ ಜಾತ್ಯಾತೀತ ಜನತಾದಳ ಬಸವನಬಾಗೇವಾಡಿ ವಿಧಾನಸಭಾ ಕ್ಷೇತ್ರದ ಪಂಚರತ್ನ ರಥಯಾತ್ರೆಯ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿ, ರಾಜ್ಯದ ಜನರಿಗೆ ಶಾಶ್ವತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಪಂಚರತ್ನ ಯೋಜನೆಯನ್ನು ಹಾಕಿಕೊಂಡು ಚುನಾವಣೆಯಲ್ಲಿ ಜನರ ಮುಂದೆ ಜೆಡಿಎಸ್ ಪಕ್ಷ ಹೊರಟಿದೆ. ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತಂದರೆ ಪಂಚರತ್ನ ಯೋಜನೆಗಳು ಜಾರಿಗೊಳ್ಳುವ ಮೂಲಕ ರಾಜ್ಯದ ಜನರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗಲಿದೆ, ಒಂದು ವೇಳೆ ಪಕ್ಷವನ್ನು ಅಧಿಕಾರಕ್ಕೆ ತರದೆ ಹೋದರೆ ರಾಜ್ಯದ ಜನರಿಗೆ ನಷ್ಟವಾಗಲಿದೆ. ಪಕ್ಷವನ್ನು ಅಧಿಕಾರಕ್ಕೆ ತರುವುದು ಬಿಡುವುದು ರಾಜ್ಯದ ಜನರಿಗೆ ಬಿಟ್ಟಿದ್ದೇನೆ ಎಂದರು.