ಜಮೀನಿನಲ್ಲಿ ಉಳುಮೆ ಮಾಡಿ ಹೋಟೆಲ್‌ಗೆ ಬಾಡಿಗೆ ಕಟ್ಟುತ್ತಿದ್ದೀರಾ?

Advertisement

ಬೆಂಗಳೂರು: ಜಮೀನಿನಲ್ಲಿ ಉಳುಮೆ ಮಾಡಿ ಹೋಟೆಲಿಗೆ ಬಾಡಿಗೆ ಕಟ್ಟುತ್ತಿದ್ದೀರಾ? ಎಂದು ಕರ್ನಾಟಕ ಕಾಂಗ್ರೆಸ್‌ ಮಾಜಿ ಸಿಎಂ ಕುಮಾರಸ್ವಾಮಿಯವರಿಗೆ ವ್ಯಂಗ್ಯಮಾಡಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಕರ್ನಾಟಕ ಕಾಂಗ್ರೆಸ್‌, “ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ಒಂದು ದಿನದ ಬಾಡಿಗೆ ಎಷ್ಟು ಕುಮಾರಸ್ವಾಮಿ ಅವರೇ? ಅಲ್ಲೊಂದು ಖಾಯಂ ಅಡ್ಡ ತೆರೆದಿದ್ದೀರಿ ಅಂದರೆ ಅದಕ್ಕೆ ಎಷ್ಟು ಕೋಟಿ ಸುರಿದಿದ್ದೀರಿ? ವೆಸ್ಟ್ ಎಂಡ್ ಹೋಟೆಲಿಗೆ ಜಮೀನಿನಲ್ಲಿ ಉಳುಮೆ ಮಾಡಿ ಬಾಡಿಗೆ ಕಟ್ಟುತ್ತಿದ್ದೀರಾ? ಅಥವಾ “KST” ಸಂಗ್ರಹದ ಹಣ ಬಳಸುತ್ತಿದ್ದೀರಾ? ಎಂದು ಕೇಳಿರುವ ಕಾಂಗ್ರೆಸ್‌ ಕುಮಾರಸ್ವಾಮಿಯವರೇ ಉತ್ತರಿಸಬೇಕು ಎಂದು #KSTkumara ಹ್ಯಾಷ್‌ ಟ್ಯಾಗ್‌ ಮೂಲಕ ಪ್ರಶ್ನಿಸಿದೆ.