ಉಧಂಪುರ: ಜಮ್ಮು ಮತ್ತು ಕಾಶ್ಮೀರದಲ್ಲಿ ಶೀಘ್ರವೇ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಉಧಂಪುರದಲ್ಲಿ ಸಾರ್ವಜನಿಕ ರ್ಯಾಲಿಯನ್ನದ್ದೇಶಿಸಿ ಮಾತನಾಡುತ್ತಿದ್ದ ಅವರು, ಜಮ್ಮು ಮತ್ತು ಕಾಶ್ಮೀರಕ್ಕೆ ಮತ್ತೆ ರಾಜ್ಯದ ಸ್ಥಾನಮಾನ ಸಿಗುತ್ತದೆ. ಇಲ್ಲಿನ ಜನರ ಸಮಸ್ಯೆಗಳನ್ನು ಪರಿಹರಿಸಲು ಶಾಸಕರು ಮತ್ತು ಮಂತ್ರಿಗಳು ಲಭ್ಯವಾಗಲಿದ್ದಾರೆ. ಎಲ್ಲಾ ವರ್ಗದ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲಾಗುವುದು ಎಂದರು. ಅಷ್ಟೇ ಅಲ್ಲ, ದೇಶ-ವಿದೇಶಗಳ ದೊಡ್ಡ ಕಂಪನಿಗಳು ರಾಜ್ಯದಲ್ಲಿ ಹೂಡಿಕೆ ಮಾಡಲಿವೆ. ಪ್ರವಾಸೋದ್ಯಮದ ಜೊತೆಗೆ, ರಾಜ್ಯವು ಕ್ರೀಡೆ ಮತ್ತು ಸ್ಟಾರ್ಟ್ಪ್ಗಳಿಗೂ ಹೆಸರುವಾಸಿಯಾಗಲಿದೆ ಎಂದರು.