ಮಥುರಾ: ಜ್ಞಾನವಾಪಿಯ ಮುಚ್ಚಿದ ವಾಝುಖಾನ ಟ್ಯಾಂಕ್ ಸ್ವಚ್ಛಗೊಳಿಸಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.
2022 ಮೇ ತಿಂಗಳಿಂದಲೂ ಮುಚ್ಚಲಾಗಿದ್ದ ಈ ಟ್ಯಾಂಕ್ನ್ನು ವಾರಣಾಸಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರ ಮೇಲ್ವಿಚಾರಣೆಯಲ್ಲಿ ಸ್ವಚ್ಛಗೊಳಿಸುವಂತೆ ಸುಪ್ರೀಂ ಕೋರ್ಟ್ ಹೇಳಿದೆ.
ವಾಝುಖಾನ ಟ್ಯಾಂಕ್ ಬಳಿ ಕೊಳೆ ತುಂಬಿಕೊಂಡಿದ್ದರಿಂದ ಆ ಪ್ರದೇಶವನ್ನು ಸ್ವಚ್ಛಗೊಳಿಸಲು ಅನುಮತಿ ನೀಡುವಂತೆ ಹಿಂದು ಸಂಘಟನೆ ನ್ಯಾಯಾಲಯದ ಮೆಟ್ಟಿಲೇರಿತ್ತು. ಈ ಕುರಿತು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಸ್ವಚ್ಛಗೊಳಿಸಲು ಅನುಮತಿ ನೀಡಿದೆ.