ಟಿಪ್ಪು ಕೊಂದಿದ್ದು ಉರಿಗೌಡ, ನಂಜೇಗೌಡ ಎನ್ನುವುದು ಸತ್ಯ: ಸಿ.ಟಿ ರವಿ

c t ravi
Advertisement

ಧಾರವಾಡ: ಉರಿಗೌಡ, ನಂಜೇಗೌಡ ಟಿಪ್ಪು ಕೊಂದಿದ್ದು ಎಂಬುದು ಐತಿಹಾಸಿಕ ಸತ್ಯ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ.
ಧಾರವಾಡ ಜಿಲ್ಲೆಯ ಕುಂದಗೋಳದಲ್ಲಿ ಮಾತನಾಡಿದ ಅವರು, ಟಿಪ್ಪು ಸುಲ್ತಾನ್ ಬದುಕಿದ್ದರೆ ಹಾಸನವನ್ನ ʻಕೈಮಾಬಾದ್ʼ ಅಂತಾ ಕರೆಯುತ್ತಿದ್ದ, ಹಾಸನವನ್ನ ಆ ರೀತಿಯಲ್ಲಿ ಕರೆಸಿಕೊಳ್ಳೋಕೆ ಕುಮಾರಸ್ವಾಮಿಗೆ ಇಷ್ಟ ಇತ್ತು ಅನ್ನಿಸುತ್ತೆ ಎಂದು ಅವರು ವ್ಯಂಗ್ಯವಾಡಿದ್ದು, ಕುಮಾರಸ್ವಾಮಿಯವರಿಗೆ ಹಾಸನ ಬೇಕೋ? ಕೈಮಾಬಾದ್ ಬೇಕೋ? ಅವರೇ ತಿರ್ಮಾನಿಸಲಿ ಎಂದರು.