ತಡೆಗೋಡೆ ಕುಸಿತ: ಬಾವಿಯಲ್ಲಿ ಬಿದ್ದ 25 ಕ್ಕೂ ಹೆಚ್ಚು ಭಕ್ತರು

ಕುಸಿತ
Advertisement

ಇಂದೋರ್‌: ಮಧ್ಯಪ್ರದೇಶದ ಇಂದೋರ್‌ನ ಬೆಳೇಶ್ವರ ಮಹಾದೇವ್ ಜುಲೇಲಾಲ್ ದೇವಸ್ಥಾನದಲ್ಲಿ ಭಾರಿ ಅವಘಡ ಸಂಭವಿಸಿದ್ದು, ಮೇಲ್ಛಾವಣಿ ಕುಸಿದು ಬಾವಿಗೆ ಬಿದ್ದ 25 ಕ್ಕೂ ಹೆಚ್ಚು ಜನ ಬಿದ್ದಿರುವ ಘಟನೆ ನಡೆದಿದೆ, ಅಗ್ನಿಶಾಮಕ ದಳ, ಪೊಲೀಸ್ ಅಧಿಕಾರಿಗಳು ಹಾಗೂ ಜಿಲ್ಲಾಡಳಿತ ಈಗಾಗಲೇ ಸ್ಥಳಕ್ಕೆ ಧಾವಿಸಿದ್ದಾರೆ, ರಕ್ಷಣಾ ಕಾರ್ಯ ನಡೆಯುತ್ತಿದೆ, ದೇವಸ್ಥಾನದ ಒಳಗೆ ಇದ್ದ ಬಾವಿಯನ್ನು ಮುಚ್ಚಲಾಗಿತ್ತು. ರಾಮ ನವಮಿ ಅಂಗವಾಗಿ ಪೂಜೆ ಸಲ್ಲಿಸಲು ಅಧಿಕ ಸಂಖ್ಯೆಯಲ್ಲಿ ಭಕ್ತರು ಸೇರಿದ್ದರು. ತೂಕ ಹೆಚ್ಚಾಗಿದ್ದರಿಂದ ಇದ್ದಕ್ಕಿದ್ದಂತೆ ನೆಲ ಕುಸಿದಿದೆ.. ಕನಿಷ್ಠ 25 ಭಕ್ತರು ಬಾವಿಯೊಳಗೆ ಬಿದ್ದಿದ್ದಾರೆ ಎಂದು ವರದಿಯಾಗಿದೆ. ಈ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.