ದಾವಣಗೆರೆ ಜಿಲ್ಲೆಯ ನೂತನ ಎಸ್ಪಿಯಾಗಿ ಉಮಾ ಪ್ರಶಾಂತ್ ನಿಯೋಜನೆ

Advertisement

ದಾವಣಗೆರೆ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ಉಮಾ ಪ್ರಶಾಂತ್ ಅವರನ್ನು ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ.
ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಜಿಲ್ಲೆಗೆ ಎಸ್ಪಿಯಾಗಿ ಬಂದಿದ್ದ ಡಾ.ಅರುಣ್ ೫ ತಿಂಗಳಲ್ಲೇ ವರ್ಗಾವಣೆಯಾಗಿದ್ದರು. ನೂತನ ಎಸ್ಪಿ ಬರುವವರೆಗೆ ಜಿಲ್ಲೆಯ ಪ್ರಭಾರ ವಹಿಸಿಕೊಂಡಿದ್ದರು. ಇದೀಗ ಜಿಲ್ಲೆಯ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಉಮಾ ಪ್ರಶಾಂತ್ ನಿಯೋಜನೆಗೊಂಡಿದ್ದಾರೆ. ಈ ಹಿಂದೆ ಕುಣಿಗಲ್, ಕಾರವಾರ, ಮಂಗಳೂರಿನಲ್ಲಿ ಕಾರ್ಯನಿರ್ವಹಿಸಿದ್ದ ಇವರು, ಚಿಕ್ಕಮಗಳೂರಿನಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕೆಲಸ ಮಾಡಿದ್ದರು.