‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ ತಡೆ: ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್​ ನಕಾರ

Advertisement

ನವದೆಹಲಿ: ಲವ್​ ಜಿಹಾದ್​ ಹಿನ್ನೆಲೆಯಿರುವ “ದಿ ಕೇರಳ ಸ್ಟೋರಿ” ಸಿನಿಮಾದ ಬಿಡುಗಡೆಗೆ ತಡೆ ನೀಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್​ ಇಂದು ವಜಾ ಮಾಡಿದೆ. ನ್ಯಾಯಮೂರ್ತಿಗಳಾದ ಕೆಎಂ ಜೊಸೆಫ್ ಮತ್ತು ಬಿವಿ ನಾಗರತ್ನ ಅವರನ್ನೊಳಗೊಂಡ ಪೀಠ ಅರ್ಜಿ ವಿಚಾರಣೆಯನ್ನು ನಿರಾಕರಿಸಿದೆ. ವಕೀಲರಾದ ಕಪಿಲ್ ಸಿಬಾಲ್ ಹಾಗೂ ನಿಜಾಮ್ ಪಾಶಾಗೆ ಈ ಕುರಿತು ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಕೆ ಮಾಡಲು ಪೀಠ ಸೂಚನೆ ನೀಡಿದೆ. ಈ ಚಿತ್ರವನ್ನು ಸೆನ್ಸಾರ್ ಮಂಡಳಿಯವರು ನೋಡಿದ್ದಾರೆ ಮತ್ತು ಅಲ್ಲಿಂದ ಪ್ರಮಾಣಪತ್ರ ಸಿಕ್ಕಿದೆ. ನೀವು ಸಿನಿಮಾನ ರಿಲೀಸ್​ನ ಚಾಲೆಂಜ್ ಮಾಡಬೇಕು ಎಂದರೆ ಸೆನ್ಸಾರ್ ಪ್ರಕ್ರಿಯೆಯನ್ನು ಪ್ರಶ್ನೆ ಮಾಡಬೇಕು’ ಎಂದು ಕೋರ್ಟ್ ಹೇಳಿದೆ.