ದುರಾಡಳಿತ ಮರೆಮಾಚಲು ಇಲ್ಲ ಸಲ್ಲದ ಪ್ರಕರಣ

Advertisement

ಬೆಂಗಳೂರು: ನಿಮ್ಮ ದುರಾಡಳಿತವನ್ನು ಮರೆಮಾಚಲಿಕ್ಕೆ 81 ವರ್ಷದ ಬಿಜೆಪಿ ವರಿಷ್ಠರಾದ ಯಡಿಯೂರಪ್ಪನವರ ಮೇಲೆ ಈ ಇಲ್ಲ ಸಲ್ಲದ ಪ್ರಕರಣ ಎಳೆಯುತ್ತಿರುವುದು ರಾಜಕೀಯ ವೈಶಮ್ಯವಷ್ಟೇ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಲೋಕಸಭೆ ಚುನಾವಣೆ 2024ರಲ್ಲಿ ಸೋಲುಂಡ ಕಾಂಗ್ರೆಸ್ ಅದನ್ನು ಜೀರ್ಣಿಸಿಕೊಳ್ಳಲಾಗದೆ ಆಡಳಿತವನ್ನು ದುರುಪಯೋಗ ಮಾಡಿ ಮನಬಂದಂತೆ ಷಡ್ಯಂತ್ರ ಮಾಡುತ್ತಿದೆ. ‘ಆಕೆ ಮಾನಸಿಕವಾಗಿ ಅಸ್ವಸ್ಥಳು, ದುರುದ್ದೇಶದಿಂದ ದೂರು ನೀಡಿದ್ದಾಳೆ. ಆಕೆ ಈಗಾಗಲೇ ಐಎಎಸ್, ಐಪಿಎಸ್ ಅಧಿಕಾರಿಗಳು ಸೇರಿದಂತೆ ರಾಜಕಾರಣಿಗಳ ಮೇಲೆ 60ಕ್ಕೂ ಹೆಚ್ಚು ಕೇಸ್ ಗಳನ್ನು ದಾಖಲಿಸಿದ್ದಾಳೆ’ ಎಂದು ಅವರ ಗೃಹ ಮಂತ್ರಿಗಳೇ ಖುದ್ದಾಗಿ ಈ ಹಿಂದೆ ಹೇಳಿದ್ದರು. ಈಗ ನಿಮ್ಮ ದುರಾಡಳಿತವನ್ನು ಮರೆಮಾಚಲಿಕ್ಕೆ 81 ವರ್ಷದ ಬಿಜೆಪಿ ವರಿಷ್ಠರಾದ ಯಡಿಯೂರಪ್ಪನವರ ಮೇಲೆ ಈ ಇಲ್ಲ ಸಲ್ಲದ ಪ್ರಕರಣ ಎಳೆಯುತ್ತಿರುವುದು ರಾಜಕೀಯ ವೈಶಮ್ಯವಷ್ಟೇ. ನಿಮ್ಮ ಈ ದುರ್ಬುದ್ಧಿಗೆ ನೀವು ತಕ್ಕ ಪಾಠ ಕಲಿಯಲಿದ್ದೀರಿ ಎಂದಿದ್ದಾರೆ.