ನದಿಯಲ್ಲಿ ಮುಳುಗಿ ತಾಯಿ, ಮಕ್ಕಳಿಬ್ಬರ ದುರ್ಮರಣ

Advertisement

ವಿಜಯಪುರ: ಇಂಡಿ ತಾಲೂಕಿನ ಖೇಡಗಿ ಗ್ರಾಮದ ಬಳಿಯ ಭೀಮಾ ನದಿಯಲ್ಲಿ ತಾಯಿ ಮತ್ತು ಇಬ್ಬರು ಮಕ್ಕಳು ನೀರುಪಾಲಾಗಿದ್ದಾರೆ. ಬಟ್ಟೆ ತೊಳೆಯಲೆಂದು ಗೀತಾ ತನ್ನಿಬ್ಬರು ಮಕ್ಕಳನ್ನು ಕರೆದುಕೊಂಡು ಭೀಮಾ ನದಿ ತೀರಕ್ಕೆ ಹೋಗಿದ್ದರು. ಬಟ್ಟೆ ತೊಳೆಯುವಾಗ ಬಾಲಕ ನೀರಿಗೆ ಇಳಿದಿದ್ದು ನೀರಿನ ಸೆಳೆತಕ್ಕೆ ಆತ ನೀರಿನಲ್ಲಿ ಮುಳುಗಿದ್ದಾನೆ. ಶೋಭಿತಾ ತಮ್ಮನನ್ನು ರಕ್ಷಿಸಲು ಮುಂದಾಗಿದ್ದು ಆಕೆ ಸಹ ನೀರಿನಲ್ಲಿ ಮುಳುಗಿದ್ದಾಳೆ. ಮಕ್ಕಳಿಬ್ಬರನ್ನು ರಕ್ಷಿಸಲು ಹೋಗಿ ತಾಯಿಯು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ ಈ ಪ್ರಕರಣ ಇಂಡಿ ಗ್ರಾಮೀಣ ‌ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.