ನರೇಂದ್ರ ಮೋದಿಯವರಿಗೆ ನಾಲಾಯಕ್ ಎಂದವರಿಗೆ ತಕ್ಕ ಪಾಠ ಕಲಿಸಿ

Advertisement

ಮೈಸೂರು: ಸೋಲಿನ ಹತಾಶೆಯಿಂದ ಕಾಂಗ್ರೆಸ್ ಕೀಳು ಮಟ್ಟದ ಮಾತುಗಳನ್ನು ಆಡುತ್ತಿದೆ. ನರೇಂದ್ರ ಮೋದಿಯವರಿಗೆ ಪ್ರಿಯಾಂಕ್ ಖರ್ಗೆ ಅವರು ನಾಲಾಯಕ್ ಎಂದಿದ್ದಾರೆ. ಅವರನ್ನು ನೀವು ಕ್ಷಮಿಸುತ್ತಿರಾ? ಅವರಿಗೆ ತಕ್ಕ ಪಾಠವನ್ನು ಕಲಿಸಲು ಬಿಜೆಪಿಗೆ ಮತ ನೀಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.
ಇಂದು ಮೈಸೂರಿನ ಕೃಷ್ಣರಾಜ ಕ್ಷೇತ್ರದ ಅಭ್ಯರ್ಥಿ ಶ್ರೀವತ್ಸ ಪರ ಪ್ರಚಾರ ನಡೆಸಿ ಅವರು ಮಾತನಾಡಿ‌, ನಾವು ನಮ್ಮ ಡಬಲ್ ಇಂಜಿನ್ ಸರ್ಕಾರದ ಕಾರ್ಯಕ್ರಮಗಳ ಮೂಲಕ ಸಕಾರಾತ್ಮಕ ಮತಗಳ ಪಡೆಯುವ ಪ್ರಯತ್ನ ಮಾಡುತ್ತಿದ್ದೇವೆ.‌ ಆದರೆ, ವಿರೋಧ ಪಕ್ಷ ತಳಮಟ್ಟದ ಮಾತುಗಳನ್ನಾಡಿ, ಹತಾಶರಾಗಿ ನಕಾರಾತ್ಮಕ ಚುನಾವಣೆ ಮಾಡುತ್ತಿದ್ದಾರೆ. ಯಾರು ಕೆಲಸ ಮಾಡಿದ್ದಾರೆ ಅವರಿಗೆ ಜನರು ಬೆಂಬಲ ಕೊಡುತ್ತಾರೆ.