ನಾಟಕದಲ್ಲೊಂದು ನಾಟಕಕ್ಕೆ ಕಂಬಾರ ವಿಷಾದ

Advertisement

ಮೈಸೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ ಕಂಬಾರ ಅವರ ‘ಸಾಂಬಶಿವ ಪ್ರಹಸನ’ ನಾಟಕವನ್ನು ತಿರುಚಿ, ಸಿದ್ದರಾಮಯ್ಯನವರನ್ನು ಅವಹೇಳನ ಮಾಡುವ ರೀತಿ ಮೈಸೂರು ರಂಗಾಯಣದಲ್ಲಿ ನಾಟಕ ಪ್ರದರ್ಶಿಸಿದ ಬೆನ್ನಲ್ಲೇ ಕಂಬಾರರು ಮೈಸೂರು ಪೊಲೀಸ್ ಕಮಿಷನರ್‌ಗೆ ಪತ್ರ ಬರೆದಿದ್ದಾರೆ.
“ಮೈಸೂರಿನ ರಂಗಾಯಣದಲ್ಲಿ ನನ್ನ ನಾಟಕ, ಸಾಂಬಶಿವ ಪ್ರಹಸನವನ್ನು ಅಸಹ್ಯವಾಗಿ ತಿರುಚಿ ಪ್ರದರ್ಶಿಸಿರುವ ಬಗ್ಗೆ ನನಗೆ ತುಂಬ ವಿಷಾದವಾಗಿದೆ” ನಾಟಕವನ್ನು ತಿರುಚಿದವರು ಮತ್ತು ನಾಟಕ ಪ್ರದರ್ಶಿಸಲು ಅವಕಾಶ ನೀಡಿರುವವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಅವರು ಕೋರಿದ್ದಾರೆ.