ನಾಮಪತ್ರ ವಾಪಸ್‌ ಪಡೆದು ನಾಪತ್ತೆಯಾದ ಜೆಡಿಎಸ್‌ ಅಭ್ಯರ್ಥಿ

Advertisement

ಮಂಗಳೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಅಲ್ತಾಫ್‌ ಕುಂಪಲ ನಾಮಪತ್ರವನ್ನು ವಾಪಸ್‌ ಪಡೆದುಕೊಂಡು ನಾಪತ್ತೆಯಾಗಿದ್ದು, ಫೋನ್‌ ಕೂಡ ಸ್ವಿಚ್‌ ಆಫ್‌ ಮಾಡಿದ್ದಾರೆ. ಈ ಮೂಲಕ ಮತದಾನಕ್ಕೂ ಮುನ್ನವೇ ಜೆಡಿಎಸ್‌ನ ಎರಡನೇ ವಿಕೆಟ್‌ ಪತನವಾದಂತಾಗಿದೆ. ಆದರೆ ಜೆಡಿಎಸ್ ನಾಯಕರ ಸಂಪರ್ಕಕ್ಕೂ ಸಿಗದೇ ಪರಾರಿ ಆಗಿರುವ ಜೆಡಿಎಸ್ ಅಭ್ಯರ್ಥಿ ನಾಪತ್ತೆ ಬಗ್ಗೆ ಹಲವು ಅನುಮಾನ ವ್ಯಕ್ತವಾಗಿವೆ.