ನಾಳೆ ಜನತಾ ದರ್ಶನ ಇಲ್ಲ

Advertisement

ಬೆಂಗಳೂರು: ನಾಳೆ ನಡೆಯಬೇಕಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನತಾ ದರ್ಶನ ಕಾರ್ಯಕ್ರಮವನ್ನು ಮುಂದೂಡಲಾಗಿದೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ದಿಲ್ಲಿಯಲ್ಲಿ ಅಕ್ಟೋಬರ್‌ 9ರಂದು ನಡೆಯುತ್ತಿರುವ ಎಐಸಿಸಿ ಕಾರ್ಯಕಾರಿ ಸಭೆಯಲ್ಲಿ ಭಾಗವಹಿಸಲು ಭಾನುವಾರ ರಾತ್ರಿ ದಿಲ್ಲಿಗೆ ಸಿಎಂ ಸಿದ್ದರಾಮಯ್ಯ ತೆರಳುತ್ತಿದ್ದಾರೆ. ಈ ಹಿನ್ನೆಲೆ ಅಂದು ನಿಗದಿಯಾಗಿದ್ದ ಜನತಾ ದರ್ಶನವನ್ನು ಮುಂದೂಡಲಾಗಿದೆ. ಮುಂದಿನ ಜನತಾ ದರ್ಶನ ಕಾರ್ಯಕ್ರಮದ ದಿನಾಂಕವನ್ನು ಮುಂದೆ ತಿಳಿಸಲಾಗುವುದು ಎಂದಿದ್ದು, ದೂರದ ಊರುಗಳಿಂದ ಮುಖ್ಯಮಂತ್ರಿಗಳ ಭೇಟಿಗೆ ಆಗಮಿಸಲು ಉದ್ದೇಶಿಸಿದ್ದವರು ದಯವಿಟ್ಟು ಇದನ್ನು ಗಮನಿಸಿ ಎಂದು ತಿಳಿಸಿದ್ದಾರೆ