ನೂರಕ್ಕೆ ನೂರರಷ್ಟು ಬಿಜೆಪಿಗೆ ಸ್ಪಷ್ಟ ಬಹುಮತ

Advertisement

ಹುಬ್ಬಳ್ಳಿ: ‘ರಾಜ್ಯದಲ್ಲಿ ನೂರಕ್ಕೆ ನೂರರಷ್ಟು ಬಿಜೆಪಿ ಸ್ಪಷ್ಟ ಬಹುಮತ ಪಡೆದು ಆಡಳಿತಕ್ಕೆ ಬರಲಿದೆ. ಇದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು
ಲಿಂಗಾಯತ ಮುಖಂಡರ ಸಭೆಗೂ ಮುನ್ನ ಮಾತನಾಡಿದ ಅವರು, ಹುಬ್ಬಳ್ಳಿ ಕಾರ್ಯಕರ್ತರೊಂದಿಗೆ ಇಂದು ಸಮಾಲೋಚನೆ ನಡೆಸಿ ಚರ್ಚಿಸಲಾಗುವುದು. ನಾಳೆಯೂ ಬೇರೆ ಬೇರೆ ಕಡೆ ರ್ಯಾಲಿ, ಸಭೆ ನಡೆಸಿ ಪ್ರಚಾರ ನಡೆಸಲಾಗುವುದು. ಎಲ್ಲೆಡೆಯಿಂದ ಬಿಜೆಪಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ’ ಎಂದರು.
‘ಮುಸ್ಲಿಂ ಮತಗಳು ಬೇಡ’ ಎನ್ನುವ ಕೆ.ಎಸ್. ಈಶ್ವರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ‘ಅದು ಈಶ್ವರಪ್ಪನವರ ವೈಯಕ್ತಿಕ ಹೇಳಿಕೆ. ಅದಕ್ಕೂ ಪಕ್ಷಕ್ಕೂ ಸಂಬಂಧವಿಲ್ಲ. ಬಿಜೆಪಿಗೆ ಎಲ್ಲ ಸಮುದಾಯದವರ ಬೆಂಬಲವಿದೆ’ ಎಂದರು.