ಬೀದರ್: ಬಂಧಿಸಲು ಹೋಗಿದ್ದ ಪೊಲೀಸರ ಮೇಲೆಯೇ ದರೋಡೆಕೋರರು ಹಲ್ಲೆಗೆ ಮುಂದಾಗಿದ್ದು, ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ಬೀದರ್ನ ಮೈಕೂರ್ ರಿಂಗ್ರೋಡ್ನಲ್ಲಿ ನಡೆದಿದೆ.
ಖಚಿತ ಮಾಹಿತಿ ಪಡೆದು ಹಲವು ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಖದೀಮರನ್ನು ಬಂಧಿಸಲು ಪೊಲೀಸರು ಮುಂದಾಗಿದ್ದರು. ಈ ವೇಳೆ ಏಕಾಏಕಿ ದರೋಡೆಕೋರರೇ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಸಿಪಿಐ ಮಲ್ಲಿಕಾರ್ಜುನ ಯಾತನೂರ್ ಗಾಳಿಯಲ್ಲಿ ಗುಂಡು ಹಾರಿಸಿದ್ದು, ಓರ್ವ ಖದೀಮ ಸೆರೆಸಿಕ್ಕಿದ್ದು, ಮತ್ತೋರ್ವ ಪರಾರಿಯಾಗಿದ್ದಾನೆ.