ಚಿತ್ರದುರ್ಗ: ಪೌರ ಕಾರ್ಮಿಕರಿಗೆ ನೀಡಿದ ಆಹಾರದಲ್ಲಿ ಜಿರಳೆ ಪತ್ತೆಯಾಗಿದ್ದು, ಆಹಾರ ಸರಬರಾಜು ಮಾಡಿದ ಹೋಟೆಲ್ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಕರುನಾಡ ವಿಜಯಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾ ಅಧ್ಯಕ್ಷ ಕೆ.ಟಿ.ಶಿವಕುಮಾರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಳಪೆ ಆಹಾರ ನೀಡಿದ ಹೋಟೆಲ್ ವಿರುದ್ದ ಕ್ರಮಕ್ಕೆ ಆಗ್ರಹಿಸಲಾಯಿತು.