ಪ್ರಜಾಧ್ವನಿಯಲ್ಲಿ ಕಾಂಗ್ರೆಸ್ ವಾಗ್ದಾಳಿ

ಪ್ರಜಾಧ್ವನಿ
Advertisement

ಹೊಸಪೇಟೆ: ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ೪೧ ಸ್ಥಾನಗಳ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ನಾಯಕರು, ವಿಜಯನಗರ ಜಿಲ್ಲಾ ಕೇಂದ್ರ ಹೊಸಪೇಟೆಯಲ್ಲಿ ಜರುಗಿದ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಬಿಜೆಪಿ ವಿರುದ್ಧ ತ್ರೀವ ವಾಗ್ದಾಳಿ ನಡೆಸಿದರು. ಜತೆಗೆ ಈ ಭಾಗದ ಅಭಿವೃದ್ಧಿಗೆ ಭರವಸೆಗಳ ಮಳೆ ಸುರಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ೫೦೦ ಕೋಟಿ ರೂ. ಮೀಸಲಿಡಲಾಗುವುದು, ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ನಗರದ ಡಾ.ಪುನೀತ್ ರಾಜಕುಮಾರ್ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕಾಂಗ್ರೆಸ್ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಹೈ-ಕ ಭಾಗಕ್ಕೆ ೩೭೧ ಜೆ ಜಾರಿಗೊಳಿಸಿ, ಶೈಕ್ಷಣಿಕ ಉದ್ಯೋಗ ಸೇರಿದಂತೆ ಈ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ಕಾರಣವಾಗಿದೆ. ಆದರೆ ಬಿಜೆಪಿಯದು ಹೈದರಾಬಾದ್ ಕರ್ನಾಟಕ ಹೆಸರನ್ನು ತೆಗೆದು ಕಲ್ಯಾಣ ಕರ್ನಾಟಕ ಎಂದು ಹೆಸರು ಬದಲಾವಣೆ ಮಾಡಿದ ಸಾಧನೆ ಬಿಟ್ಟರೆ ಮತ್ತೇನು ಇಲ್ಲ ಎಂದು ಲೇವಡಿ ಮಾಡಿದರು.