ಬಸವಣ್ಣನವರ ಭಾವಚಿತ್ರ ಅನಾವರಣ

Advertisement

ವಿಜಯಪುರ: ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಾಡಿನ ಸಾಂಸ್ಕೃತಿಕ ನಾಯಕರಾದ ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್‌ ಅನಾವರಣಗೊಳಿಸಿದ್ದಾರೆ.
ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಅವರ ತತ್ವಾದರ್ಶಗಳನ್ನು ಭಕ್ತಿಯಿಂದ ಸ್ಮರಿಸಿರಿವ ಅವರು ನಾಲ್ಕು ದಿನಗಳ ಹಿಂದೆ ವಿಶ್ವ ಗುರು ಬಸವಣ್ಣ ಸಾಂಸ್ಕೃತಿಕ ನಾಯಕ ಎಂಬ ಘೋಷವಾಕ್ಯ ಇಡೀ ರಾಜ್ಯದ ತುಂಬ ಮೊಳಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ
ಅವರು ಹೇಳಿದ್ದರು. ಅದರಂತೆ ಈ ದಿನ ನಮ್ಮ ವಿಜಯಪುರದಲ್ಲೂ ಸಾಂಸ್ಕೃತಿಕ ನಾಯಕ ಬಸವಣ್ಣನವರ ಭಾವಚಿತ್ರ ಅನಾವರಣಗೊಳಿಸಿದ್ದು ಸಂತಸ ತರಿಸಿದೆ.
ಇಂದಿನ ಕಾರ್ಯಕ್ರಮದಲ್ಲಿ ಶಾಲಾಮಕ್ಕಳು ಸೇರಿದಂತೆ ಹಲವರು ಬಸವಣ್ಣ, ಶಿವಶರಣರ ಪೋಷಾಕಿನಲ್ಲಿ ಕಾಣಿಸಿಕೊಂಡಿದ್ದು ವಿಶೇಷವಾಗಿತ್ತು ಎಂದಿದ್ದಾರೆ.