ಬಿಜೆಪಿಯಿಂದ ಪೇಸಿಎಸ್‌ ಅಭಿಯಾನ

Advertisement

ಮಂಡ್ಯ: ಬಿಜೆಪಿ ಅಧಿಕಾರದಲ್ಲಿದ್ದಾಗ ಪೇಸಿಎಂ ಅಭಿಯಾನದ ಮೂಲಕ ಕಾಂಗ್ರೆಸ್‌ ಏಟು ಕೊಟ್ಟಿದ್ದು, ಈಗ ಅದನ್ನೇ ಬಳಸಿಕೊಂಡ ಬಿಜೆಪಿ ಕಾಂಗ್ರೆಸ್‌ನ ಚಲುವರಾಯಸ್ವಾಮಿ ವಿರುದ್ಧ ಪೇಸಿಎಸ್‌ ಅಭಿಯಾನಕ್ಕೆ ಮುಂದಾಗಿದೆ.
ನಾಗಮಂಗಲ ಶಾಸಕ ಹಾಗೂ ಕೃಷಿ ಸಚಿವ ಸಿ.ಎಸ್. ಚಲುವರಾಯಸ್ವಾಮಿ ಕೃಷಿ ಇಲಾಖೆಯ ಅಧಿಕಾರಿಗಳ ಬಳಿ ಲಂಚ ಬೇಡಿಕೆ ಆರೋಪದಡಿ ಸಿಐಡಿ ತನಿಖೆಯನ್ನು ಎದುರಿಸುತ್ತಿದ್ದಾರೆ. ಇದ್ದನ್ನೇ ಅಸ್ತ್ರವನ್ನು ಮಾಡಿಕೊಂಡಿರುವ ಬಿಜೆಪಿ, ಸಾಮಾಜಿಕ ಜಾಲತಾಣದಲ್ಲಿ ಕ್ಯೂಆರ್ ಕೋಡ್ ಬಳಕೆ ಮಾಡಿಕೊಂಡು ಪೇಸಿಎಸ್ ಎಂದು ಮಾಡಿ 6 ರಿಂದ 8 ಲಕ್ಷ ರೂಪಾಯಿಯನ್ನು ಇಲ್ಲಿ ಪಡೆಯಲಾಗುತ್ತದೆ ಎಂದು ಹಾಕಲಾಗಿದೆ. ಜೊತೆಗೆ ಟ್ಯಾಗ್‍ಲೈನ್‍ನಲ್ಲಿ ಸ್ಕ್ಯಾನ್ ಮಾಡಿ ಚಲುವರಾಯಸ್ವಾಮಿಯ ಭ್ರಷ್ಟಾಚಾರ ಹೊರ ಬರುತ್ತೆ ನೋಡಿ ಎಂದು ಹಾಕಿದ್ದಾರೆ. ಈ ಪೇಸಿಎಸ್ ಮೂಲಕ ಕೃಷಿ ಇಲಾಖೆಯ ಟ್ರಾನ್ಸ್‌ಫರ್ ಗೆ ಲಂಚ ತೆಗೆದುಕೊಳ್ಳುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಲಾಗಿದೆ.