ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ, ಚರ್ಚೆಯೇ ಆಗಿಲ್ಲ: ಸಿಎಂ ಬೊಮ್ಮಾಯಿ

ಸಿಎಂ ಬೊಮ್ಮಾಯಿ
Advertisement

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯಾಗುವ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ಈ ಬಗ್ಗೆ ಚರ್ಚೆಯೇ ಆಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬೆಂಗಳೂರಿನಲ್ಲಿ ಮಾಧ್ಯದವರೊಂದಿಗೆ ಮಾತನಾಡಿದ ಅವರು, ನಳಿನ್‌ಕುಮಾರ್ ಕಟೀಲ್ ಅವರು ಕಳೆದ ಮೂರು ವರ್ಷಗಳಿಂದ ಪಕ್ಷವನ್ನು ಅತ್ಯಂತ ಸಮರ್ಥವಾಗಿ. ಮುನ್ನಡೆಸಿದ್ದಾರೆ. ಸುಮಾರು 8-10 ಬಾರಿ ರಾಜ್ಯವನ್ನು ಸುತ್ತಿದ್ದಾರೆ. ಬೂತ್ ಮಟ್ಟದಿಂದ ಸಂಘಟನೆ ಮಾಡಿದ್ದಾರೆ. ಗ್ರಾಮ ಪಂಚಾಯಿತಿ ಚುನಾವಣೆ ಮುನ್ನ ಹಾಗೂ ನಂತರ ವಿಧಾನ ಪರಿಷತ್ ಚುನಾವಣೆ, ಉಪ ಚುನಾವಣೆ ಎಲ್ಲವನ್ನೂ ಸಮರ್ಥವಾಗಿ ಸಂಘಟಿಸಿ ಎದುರಿಸಿದ್ದಾರೆ. ಯಶಸ್ವಿಯಾಗಿ ಮಾಡಿದ್ದಾರೆ. ಅವರ ನೇತೃತ್ವದಲ್ಲಿ ಮುಂದುವರೆಯುತ್ತಿದ್ದೇವೆ. ಅವರ ನೇತೃತ್ವ ಪಕ್ಷಕ್ಕೆ ಇನ್ನಷ್ಟು ಬಲ ನೀಡಲಿದೆ ಎಂದರು.