ಬಿ.ಎಸ್. ಯಡಿಯೂರಪ್ಪ ನಿವಾಸಕ್ಕೆ ಸಿಎಂ ಬೊಮ್ಮಾಯಿ‌ ಭೇಟಿ

Advertisement

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕಾವೇರಿ ನಿವಾಸಕ್ಕೆ ಭೇಟಿ ನೀಡಿದ್ದು ಚುನಾವಣಾ ಫಲಿತಾಂಶ ಕುರಿತು ವಸ್ತುಸ್ಥಿತಿ ವಿಚಾರ ವಿನಿಮಯ ಮಾಡಿಕೊಂಡು, ಮುಂದಿನ ಹೆಜ್ಜೆಯ ಬಗ್ಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ, ಇದಕ್ಕೂ ಮುನ್ನ ಬೆಂಗಳೂರಿನ ಆರ್.ಟಿ ನಗರದ ಮನೆಯಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದ ಅವರು ನಾನು ಮೊದಲಿಂದಲೂ ಒಂದೇ ಮಾತು ಹೇಳುತ್ತ ಬಂದಿದ್ದೇನೆ. ನಮಗೆ ಸ್ಪಷ್ಟ ಬಹುಮತ ಬರುತ್ತದೆ. ನಾವು ಗೆಲ್ಲುವ ವಿಶ್ವಾಸ ಇದ್ದು, ಬಹುಮತದ ಗಡಿ ದಾಟುತ್ತೇವೆ. ಮ್ಯಾಜಿಕ್ ನಂಬರ್ ತಲುಪುತ್ತೇವೆ. ಎಲ್ಲ ಕ್ಷೇತ್ರ, ಬೂತ್‌ಗಳಿಂದ ಗ್ರೌಂಡ್ ಮಾಹಿತಿ ತರಿಸಿದ್ದೇವೆ ಎಂದರು.